ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿರುವ ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೆ ತೆರಳಿದಾಗ ಪೊಲೀಸರಿಗೆ ಕಾರಿನಿಂದ ಗುದ್ದಿ ಆರೋಪಿ ಎಸ್ಕೇಪ್ ಆಗಿದ್ದಾರೆ.
ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್, ಪೊಲೀಸರ ಕಾರಿಗೆ ಗುದ್ದಿ ಎಸ್ಕೇಪ್ ಆದ ಘಟನೆ ನಿನ್ನೆ (ಫೆ.28) ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. SIT ತಂಡದ ಇನ್ಸ್ಪೆಕ್ಟರ್ ಅನಿಲ್ ಮತ್ತು ಅವರ ತಂಡ ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಜರುಗಿದೆ.
ಜಿಂದಾಬಾದ್ ಘೋಷಣೆ ಕೂಗಿದವರ ಪರ ನಿಂತ್ರಾ ರಾಜ್ಯ ಕಾಂಗ್ರೆಸ್ ಉಸ್ತುವಾರಿ?: FSL ವರದಿ ಬರುವ ಮೊದಲೇ ಕ್ಲಿನ್ ಚಿಟ್
ಶ್ರೀಧರ್ ಪೂಜಾರ್ ವಿರುದ್ಧ 307 ಕೊಲೆ ಯತ್ನ, 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಇನ್ನು ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ಪಿ ಶ್ರೀಧರ್ ಪೂಜಾರ್ ಜಾಮೀನು ಅರ್ಜಿ ಹಾಕಿದ್ದರು ಆದ್ರೆ ಶ್ರೀಧರ್ ಪೂಜಾರ್ ಜಾಮೀನು ಅರ್ಜಿ ವಜಾಗೊಳಿಸಿದ್ದ ನ್ಯಾಯಾಲಯ ಈ ಹಿನ್ನಲೆ ಪ್ರಮುಖ ಆರೋಪಿಯ ಬಂಧನಕ್ಕೆ ಹೋಗಿದ್ದ SIT ಈ ಸಂದರ್ಭದಲ್ಲಿ ಪೊಲೀಸರಿಗೆ ಗುದ್ದಿ ಎಸ್ಕೇಪ್ ಆಗಿದ್ದಾರೆ.