ಬೆಂಗಳೂರು:- ನಿವೃತ್ತ ಐ.ಎ.ಎಸ್ ಅಧಿಕಾರಿ ಕೆ.ಶಿವರಾಮ್ ಅವರ ನಿಧನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆ.ಶಿವರಾಮ್ ಅವರು ಕನ್ನಡದಲ್ಲಿ ಪರೀಕ್ಷೆ ಬರೆದು ಐ.ಎ.ಎಸ್ ಉತ್ತೀರ್ಣರಾದ ಮೊದಲ ಅಧಿಕಾರಿಯಾಗಿ ಎಲ್ಲರ ಮೆಚ್ಚುಗೆ ಹಾಗೂ ಅಭಿಮಾನ ಗಳಿಸಿದ್ದರು. ರಾಜ್ಯದ ಹಲವು ಯುವಕರಿಗೆ ಸ್ಪೂರ್ತಿಯಾಗಿದ್ದರು.
ಕಲಾವಿದರಾಗಿಯೂ ಕೆ.ಶಿವರಾಮ್ ಅವರು ಜನಪ್ರಿಯರಾಗಿದ್ದಾರೆ
ಅವರ ಅಕಾಲಿಕ ಮರಣ ನೋವು ತಂದಿದೆ ಭಗವಂತ ಮೃತರ
ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.