ಮೈಸೂರು:- ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯ 50 ಕೋಟಿ ರೂ. ಆಮಿಷಕ್ಕೆ ಕಾಂಗ್ರೆಸ್ ಶಾಸಕರು ಬಗ್ಗಿಲ್ಲ. ಸರ್ಕಾರ ಬೀಳಿಸುವುದು ಬಿಜೆಪಿಯವರಿಗೆ ಅಭ್ಯಾಸವಾಗಿ ಹೋಗಿದೆ. ಬಿಜೆಪಿಯವರು ನೇರವಾಗಿ ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ರಾಜ್ಯಗಳಲ್ಲಿ ಸರ್ಕಾರ ಅತಂತ್ರ ಮಾಡಿದಂತೆ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಲುಗಾಡಿಸಲು ಬಿಜೆಪಿ ಯತ್ನಿಸಿರುವುದು ಸತ್ಯ ಎಂದು ಹೇಳಿದ್ದಾರೆ.
ಅಲ್ಲಲ್ಲಿ ಟಿಕೆಟ್ ಸಮಸ್ಯೆಯ ನಡುವೆಯೂ, ಬಿಜೆಪಿ ನಾಯಕರು ಲೋಕಸಭಾ ಚುನಾವಣೆಗೆ ಭರದ ಸಿದ್ಧತೆ ನಡೆಸ್ತಿದ್ದಾರೆ. ನಿನ್ನೆ ಸಂಜೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಕ್ಷೇತ್ರವಾರು ಮುಖಂಡರ ಸಭೆ ನಡೆಸಲಾಗಿದೆ. ಹೆಚ್ಚು ಆಕಾಂಕ್ಷಿಗಳಿರುವ, ಅಭ್ಯರ್ಥಿ ಆಯ್ಕೆ ಸಂಭಾವ್ಯ ಕಗ್ಗಂಟು ಇರುವಂತಹ ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಬಿಜೆಪಿ ರಾಜ್ಯ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ನೇತೃತ್ವದಲ್ಲಿ ಬೀದರ್, ಕೋಲಾರ, ಚಿಕ್ಕಬಳ್ಳಾಪುರ, ಉತ್ತರಕನ್ನಡ ಕ್ಷೇತ್ರಗಳ ಮುಖಂಡರ ಸಭೆ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಉಪಸ್ಥಿತರಿದ್ದರು.