ಬೆಂಗಳೂರು:– ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ ಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಬ್ಯಾಟರಿ ಜತೆ ಟೈಮರ್ ಪತ್ತೆ ಆಗಿದ್ದು, ಟೈಂ ಬಾಂಬ್ ಶಂಕೆ ವ್ಯಕ್ತವಾಗಿದೆ.
ಬ್ಯಾಗ್ ಇಟ್ಟು ಬ್ಯಾಗಿನ ಒಳಗೆ ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಜಿಲೇಟಿನ್ ಕಡ್ಡಿಗಳಿಂದ ಸ್ಪೋಟವಾಗಿದೆಯಾ? ಮೈಕ್ರೊ ಓವನ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದೆಯಾ ಎಂಬುದನ್ನು ಸಹ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಅಂತಹ ಯಾವುದೇ ಸ್ಫೋಟ ಆಗಿಲ್ಲ ಎಂದು ಹೇಳಲಾಗುತ್ತಿದೆ. ಆದ್ರೆ, ಇದೀಗ ಟೈಮರ್ ಸಿಕ್ಕಿದ್ದು, ಟೈಮರ್ ಇಟ್ಟ ಬ್ಲಾಸ್ ಮಾಡಲಾಗಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ. ಎಫ್ಎಸ್ಎಲ್ ಅಧಿಕಾರಿಗಳಿಂದಲೇ ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಬಯಲಾಗಬೇಕಿದೆ. ಇತ್ತ ಪೊಲೀಸರು ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟದಲ್ಲಿ 9 ಜನರಿಗೆ ಗಾಯಾಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ ಮೈಕ್ರೋ ಚಿಪ್ ಇಂಡಿಯಾ ಲಿ. ನಲ್ಲಿ ಕೆಲಸ ಮಾಡುತ್ತಿದ್ದ ಐವರು ಮಧ್ಯಾಹ್ನಕ್ಕೆ ಊಟಕ್ಕೆ ಬಂದಿದ್ದರು. ಊಟದ ಸಮಯಕ್ಕೆ ಸ್ಫೋಟಗೊಂಡಿದ್ದು, ಕೈ ತೊಳೆಯುವ ಜಾಗದಿಂದ ಶಬ್ಧ ಕೇಳಿ ಬಂದಿದೆ. ಉತ್ತರ ಭಾರತ ಮೂಲದ ಆಕ್ಸಿಸ್ ಬ್ಯಾಂಕ್ ಉದ್ಯೋಗಿ ಮೋಮಿ ಎಂಬಾಕೆ ಗಾಯಗೊಂಡಿದ್ದಾರೆ. ಫಾರುಕ್ ಹುಸಾಯ್, ದಿಪಾಂಶು ಎಂಬುವವರು ಗಾಯಗೊಂಡಿದ್ದು, ಸ್ವರ್ಣ ನಾರಯಣಪ್ಪ ಗಂಭೀರ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.,