ಬೆಂಗಳೂರು:- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ ಎಂದು ಅಲೋಕ್ ಮೋಹನ್ ಸ್ಪಷ್ಟನೆ ನೀಡಿದ್ದಾರೆ.
ಪೊಲೀಸರು ತನಿಖೆ ಆರಂಭಿಸಿದ್ದು, ಕೆಲ ಅನುಮಾನಾಸ್ಪದ ವಸ್ತುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಶುಕ್ರವಾರ ಮಧ್ಯಾಹ್ನ ಸುಮಾರು 1 ಗಂಟೆಗೆ ಬಾಂಬ್ ಸ್ಫೋಟಗೊಂಡಿದೆ. ವಿಧಿ ವಿಜ್ಞಾನ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು.
ಘಟನೆಯಲ್ಲಿ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ಪಡೆದಿದ್ದಾರೆ. ಎಫ್ಎಸ್ಎಲ್ ತಂಡದ ಪರಿಶೀಲನೆ ಬಳಿಕಪೂರ್ಣ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.
ರಾಮೇಶ್ವರಂ ಕೆಫೆಯ ಕೈ ತೊಳೆಯುವ ಜಾಗದಲ್ಲಿಈ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಬ್ಯಾಟರಿ, ಬೋಲ್ಟ್ಗಳು ಪತ್ತೆಯಾಗಿದೆ