ಬೆಂಗಳೂರು: ರಾಮೇಶ್ವರಂ ಕಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಸಿಎಂ ನಿವಾಸ ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ಆರಂಭವಾಗಿದ್ದು ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಯುತ್ತಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್
ಡಿಜಿ & ಐಜಿ ಅಲೋಕ್ ಮೋಹನ್,ಪೊಲೀಸ್ ಕಮಿಷನರ್ ದಯಾನಂದ್, ಲಾ& ಆರ್ಡರ್ ಎಡಿಜಿಪಿ ಹಿತೇಂದ್ರ,ಕ್ರೈಂ ಎಡಿಜಿಪಿ,ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿ
ಮೆಜೆಸ್ಟಿಕ್ನ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹೈ ಅಲರ್ಟ್
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲರ್ಟ್ ಆದ ಪೊಲೀಸರು, ಇದೀಗ ಮೆಜೆಸ್ಟಿಕ್ನ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಲಗೇಜ್ ಚೆಕ್ ಮಾಡಿಯೇ ನಿಲ್ದಾಣಕ್ಕೆ ಸಿಬ್ಬಂದಿಗಳು ಬಿಡುತ್ತಿದ್ದಾರೆ. ಜೊತೆಗೆ ಬರುವಂತಹ ಪ್ರತಿ ಪ್ರಯಾಣಿಕರ ಮೇಲೂ ಕೆಎಸ್ಆರ್ಟಿಸಿ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಯಾರಾದರೂ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದ್ರೆ ಅಂತವರ ಮೇಲೆ ನಿಗಾ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ.