ಬೆಂಗಳೂರು : ದೆಹಲಿಯಲ್ಲಿ ಇಂದು ಕರ್ನಾಟಕದಿಂದ ಸ್ಪರ್ಧೆ ಮಾಡುವ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಯಲ್ಲೇ ಇದಾರೆ ಎಂದು ತಿಳಿಸಿದರು.
Bigg News : ಲೋಕಸಭಾ ಚುನಾವಣೆ : ಮಾರ್ಚ್ 15ರಿಂದ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ
ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸ ನಿಶ್ಚಯ ಆಗಿದೆ. ಎಲ್ಲೆಡೆ ಜನ ಸೇರಿಸಲು ನಿರ್ಧಾರ ಮಾಡಿದ್ದೇವೆ. 28 ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರ ಗೆಲ್ಲುವ ಗುರಿ ಇದೆ. ಈಗಾಗಲೇ 28ಕ್ಕೆ 25 ಗೆದ್ದಿದ್ದೇವೆ. 25 ಗೆದ್ದೇ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.