ಬೆಂಗಳೂರು:ಈಶ್ವರಪ್ಪ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದಿರೋದಕ್ಕೆ ಕೆ.ಎಸ್.ಈಶ್ವರಪ್ಪ ಅವರು ಅಸಮಾಧಾನಗೊಂಡಿದ್ದಾರೆ. ಆದರೆ ನಾನು ಈಶ್ವರಪ್ಪ ಅವರ ಜೊತೆ ಮಾತನಾಡುತ್ತೇನೆ. ಈಶ್ವರಪ್ಪ ಪುತ್ರನನ್ನು MLC ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ. ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಯಡಿಯೂರಪ್ಪನವರು ರಾಜಕೀಯವಾಗಿ ಆಶೀರ್ವಾದ ಮಾಡಿ ಹರಸಿದ್ದಾರೆ: ಬಸವರಾಜ್ ಬೊಮ್ಮಾಯಿ!
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಶ್ವರಪ್ಪ ಅವರ ಜೊತೆ ಮಾತಾಡ್ತೀನಿ. ಹೈಕಮಾಂಡ್ ಕೂಡ ಮಾತಾಡಲಿದೆ. ಅವರ ಮಗನನ್ನ ಎಂಎಲ್ಸಿ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಹೈಕಮಾಂಡ್, ಬಸವರಾಜ ಬೊಮ್ಮಾಯಿಗೆ ಮಣೆ ಹಾಕಿದೆ. ಇದು ಈಶ್ವರಪ್ಪ ಅವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿ ಕಾಂತೇಶ್ಗೆ ಎಂಎಲ್ಸಿ ಸುಳಿವು ನೀಡಿದ ಬಿಎಸ್ವೈ