ತಿರುವನಂತಪುರಂ:- ಕೇರಳದಲ್ಲಿ ಸಿಎಎ ಅನುಷ್ಠಾನ ಮಾಡಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸಿಪಿಎಂ ಇಂಡಿಯಾ ಮೈತ್ರಿಕೂಟದಲ್ಲಿ ಮಿತ್ರ ಪಕ್ಷವಾಗಿದೆ. ಆದರೆ ಈ ವಿಷಯದ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇನ್ನೂ ಮಾತನಾಡದ ಕಾರಣ ಸಿಎಎ ಅಧಿಸೂಚನೆಯ ನಂತರ ಕಾಂಗ್ರೆಸ್ ತೆಗೆದುಕೊಂಡ ನಿಲುವನ್ನು ವಿಜಯನ್ ಟೀಕಿಸಿದ್ದಾರೆ. ಸಿಎಎ ಬಗ್ಗೆ ಕೇರಳ ತಲೆಬಾಗುವುದಿಲ್ಲ ಅಥವಾ ಮೌನ ವಹಿಸುವುದಿಲ್ಲ ಎಂದು ವಿಜಯನ್ ಹೇಳಿದ್ದಾರೆ.
ಪೌರತ್ವ ಕೇಂದ್ರ ವಿಷಯವಾಗಿರುವುದರಿಂದ ಸಿಎಎ ಅನುಷ್ಠಾನದಲ್ಲಿ ರಾಜ್ಯಗಳಿಗೆ ಯಾವುದೇ ಆಯ್ಕೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ ನಂತರ ಪಿಣರಾಯಿ ವಿಜಯನ್ ಅವರ ಈ ಹೇಳಿಕೆ ಬಂದಿದೆ. ಸಿಎಎ ಭಾರತದಲ್ಲಿ ಎಲ್ಲೆಡೆ ಅನ್ವಯಿಸುತ್ತದೆ. ವಿಜಯನ್ ಅವರು ಭಾರತದ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಕೇರಳದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ವಾಗ್ದಾಳಿ ನಡೆಸಿದೆ.
ಸಿಎಎ ಭಾರತದ ಕಲ್ಪನೆಗೆ ಸವಾಲನ್ನು ಒಡ್ಡುತ್ತದೆ ಮತ್ತು ಧಾರ್ಮಿಕ ತಾರತಮ್ಯಕ್ಕೆ ಮಾನ್ಯತೆಯನ್ನು ನೀಡುತ್ತದೆ ಎಂದು ವಿಜಯನ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಿಎಎ ವಿರುದ್ಧ ದನಿಯೆತ್ತಿದ್ದಾರೆ.