ಚಿತ್ರದುರ್ಗ: ಯಡಿಯೂರಪ್ಪ ವಿರುದ್ದ ಫೋಕ್ಸೋ ಕೇಸ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೇ ನೀಡಿದ್ದಾರೆ. ದೂರು ಕೊಟ್ಟ ಬಳಿಕವೇ ಬಂಧಿಸಲು ಆಗಲ್ಲ, ನಮ್ಮ ಜವಬ್ದಾರಿ ಇದೆ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರ ಕೊಟ್ಟ ಹೇಳಿಕೆ ಸರಿಯಾಗಿದೆ ಎಂದರು.
ಇನ್ನೂ ಮಾನಸಿಕ ಅಸ್ವಸ್ಥತ ಮಹಿಳೆ , ಇನ್ನೂ ಕೆಲವರ ಮೇಲೆ ದೂರು ಕೊಟ್ಟಿದ್ದಾಳೆ ಎಂದಿದ್ದಾರೆ. ರಾಜಕಾರಣದಲ್ಲಿ ಹೆಸರಿಗೆ ಕಳಂಕ ತರುವ ಎಲ್ಲಾ ಪ್ರಯತ್ನ ಮಾಡುತ್ತಾರೆ. ಈ ಕೇಸ್ ನಲ್ಲಿ ಯಾವುದೇ ಸದುದ್ದೇಶ ಇಲ್ಲ, ತನಿಖೆಯಲ್ಲಿ ಸತ್ಯ ಹೊರ ಬರುತ್ತದೆ. ಚುನಾವಣೆ ವೇಳೆ ಈ ರೀತಿಯ ಬೆಳವಣಿಗೆ ನಡೆಯುತ್ತವೆ. ಸತ್ಯಕ್ಕೆ ತನಿಖೆಯಿಂದ ಜಯ ಸಿಗುತ್ತದೆ. ಎಂದು ಹೇಳಿದರು.
ಇನ್ನೂ ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಟಿಕೆಟ್ ಪೈನಲ್ ಆಗುತ್ತದೆ. ನಾಳೆ ಅಥವಾ ನಾಡಿದ್ದು ನಮ್ಮ ಉಳಿದ ಟಿಕೆಟ್ ಪೈನಲ್ ಆಗುತ್ತದೆ. ಶ್ರೀಗಳ ಜೊತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಎಲ್ಲವೂ ಕೂಡಾ ಊಹಾಪೋಹಗಳು ಆಗಿದ್ದು, ಅಧಿಕೃತ ಪ್ರಕಟಣೆ ಮಾಡಿದ ವೇಳೆ ಗೊತ್ತಾಗುತ್ತದೆ. ಈಶ್ವರಪ್ಪ ಬೆಂಬಲಿಗರ ಸಭೆ ಕರೆದಿದ್ದಾರೆ, ನಾವು ಅವರ ಜೊತೆಗೆ ಮಾತಾಡಿದ್ದೇವೆ. ವರಿಷ್ಠರು ಕೂಡಾ ಮಾತನಾಡಿದ್ದಾರೆ, ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು.