ಮಂಡ್ಯ: 2019, 2023ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಲಿಲ್ಲ ಎಂದು ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಮತದಾರ ಬಂಧುಗಳೇ ನಮ್ಮ ತಂದೆ-ತಾಯಿಯಂದ್ರು. ರಾಜಕೀಯವಾಗಿ ನಮ್ಮಿಂದ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಈ ಜಿಲ್ಲೆಯ ಜನತೆಗೆ ಸ್ಪಷ್ಟ ಮನವಿ ಮಾಡಲು ಬಯಸುತ್ತೇವೆ. ನಮ್ಮ ತಪ್ಪುಗಳನ್ನ ತಿದ್ದಿಕೊಳ್ಳಲು ನಾನು ಸಿದ್ಧರೆದ್ದೇವೆ ಆದ್ದರಿಂದ ತಪ್ಪು ತಿದ್ದಿಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡ್ತೀನಿ ಎಂದರು.
ಬೆಚ್ಚಗಿನ ಹಾಲಿಗೆ ಒಂದು ಚಮಚ ಜೇನು ಬೆರೆಸಿ ಕುಡಿಯುವುದರಿಂದ ಸಿಗುವ ಪ್ರಯೋಜನ!
ಇನ್ನೂ ಹೊಟ್ಟೆಪಾಡಿಗಾಗಿ ಬಿಜೆಪಿ ಜೊತೆ ಸೇರಿದ್ದಾರೆಂಬ ಚಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ತಿಯೇ ನೀಡಿದ ಅವರು, ಹುಟ್ಟಿದಾಗಲೇ ಅವರು ಮಹಾರಾಜರ ವಂಶಸ್ಥರಿರಬೇಕು. ಅವರ ಬಗ್ಗೆ ನನಗಿಂತ ನಾಗಮಂಗಲದ ಜನತೆಗೆ ಗೋತ್ತಿರಬೇಕು. 1999ರ ಚುನಾವಣೆಯಲ್ಲಿ ಮೊದಲು ಅಭ್ಯರ್ಥಿ ಆಗಿದ್ರು. ನಾವೆಲ್ಲರೂ ಸೋತಿದ್ದೆವು ಆ ಚುನಾವಣೆಯಲ್ಲಿ. ಬೆಳ್ಳೂರಿನಲ್ಲಿ ಒಂದು ಕಾರ್ಯಕ್ರಮದಲ್ಲಿ ಅವರ ಜೊತೆ ಭಾಗಿಯಾಗಿದ್ದೆ. ಆಗ ಚಲುವರಾಯಸ್ವಾಮಿ ಮೇಲೆ ಅಭಿವೃದ್ಧಿ ಆಗಿಲ್ಲ ಅಂತಾ ಬೇಸರ ಆಗಬೇಡಿ ಅಂತಾ ಜನರಲ್ಲಿ ಮನವಿ ಮಾಡಿದ್ದೆ. ಇವರು ನನ್ನ ಹೊಟ್ಟೆಪಾಡಿನ ಬಗ್ಗೆ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದ್ರು.