ದಾವಣಗೆರೆ:- ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರು ಅರಮನೆ ಮೈದಾನದ ಒಡೆತನ ವಿಷಯಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸರ್ವೋಚ್ಛ ನ್ಯಾಯಾಲಯವು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದ್ದರೂ ಕರ್ನಾಟಕ ಸರ್ಕಾರ ಪ್ರಕರಣಕ್ಕೆ ಪುನಃ ಕೈ ಹಾಕುವ ಮೂಲಕ ದ್ವೇಷದ ರಾಜಕಾರಣಕ್ಕೆ ಮುಂದಾಗಿದೆ ಎಂದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕಾರಣ ಮಾಡಲಿ, ಅದರೆ ದ್ವೇಷದ ರಾಜಕಾರಣ ಬೇಡ, ಯದುವೀರ್ ಕೃಷ್ಣದತ್ ಒಡೆಯರ್ ಅವರಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿರುವ ಕಾರಣ ಕಾಂಗ್ರೆಸ್ ಸರ್ಕಾರ ಇದನ್ನೆಲ್ಲ ಮಾಡುತ್ತಿದೆ, ಅಧಿಕಾರ ಶಾಶ್ವತ ಅಲ್ಲ ಅನ್ನೋದನ್ನು ಸರ್ಕಾರ ಮನಗಾಣಬೇಕು, ಅವರು ಸಹ ಮೊದಲು ವಿರೋಧ ಪಕ್ಷದಲ್ಲಿದ್ದವರು ಎಂದು ಅಶೋಕ ಹೇಳಿದರು.
ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗಲಿದೆಯಾ ಅಂತ ಕೇಳಿದ್ದಕ್ಕೆ ಅಶೋಕ, ಅವರೊಂದಿಗೆ ಪಕ್ಷದ ವರಿಷ್ಠರು ಮಾತಾಡಿದ್ದು, ಸ್ಪರ್ಧೆ ಮಾಡಲಿದ್ದಾರೆ ಎಂದು ಖಚಿತ ಸ್ವರದಲ್ಲಿ ಹೇಳಿದ ಅಶೋಕ, ಪತ್ರಕರ್ತರು ಅದೇ ಪ್ರಶ್ನೆಯನ್ನು ಮತ್ತೊಮ್ಮೆ ಕೇಳಿದಾಗ ಕೊಂಚ ತಡಬಡಾಯಿಸಿ ಮೋಸ್ಟ್ಲೀ ಅವರು ಸ್ಪರ್ಧೆ ಮಾಡಲಿದ್ದಾರೆ ಅಂತ ಹೇಳುತ್ತಾರೆ.