ಕಲಬುರ್ಗಿ:- ವರಿಷ್ಠರು ಎಲ್ಲವನ್ನು ಗಮನದಲ್ಲಿಟ್ಟಿಕೊಂಡೇ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಮಾಧ್ಯಮಗಳಿಗೆ ಎಲ್ಲಿಂದ ಮಾಹಿತಿ ಲಭ್ಯಾವಾಗುತ್ತದೆಯೋ ಗೊತ್ತಿಲ್ಲ, ಆದರೆ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಅಂಶಗಳ ವಿವರ ಕೇಂದ್ರ ಸಂಸದೀಯ ಮಂಡಳಿ ಮತ್ತು ವರಿಷ್ಠರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಳಿಯಲ್ಲಿದ್ದು ಅವರು ಎಲ್ಲವನ್ನು ಗಮನದಲ್ಲಿಟ್ಟಿಕೊಂಡೇ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದಾರೆ, ಅವರ ತೀರ್ಮಾನಗಳನ್ನು ತಾವ್ಯಾರೂ ಪ್ರಶ್ನಿಸಲಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದ ಅವರು 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಸಿದ್ದರಾಮಯ್ಯ ಜಾರಿಗೊಳಿಸಲೇ ಬೇಕು ಎಂದರು.
ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಆಯೋಗದ ಶಿಫಾರಸ್ಸಿನಂತೆ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ಕೊಟ್ಟಾಗಿದೆ, ಅಂತಿಮ ಶಿಫಾರಸ್ಸನ್ನು ಈಡೇರಿಸುವ ಬಾಧ್ಯತೆ ಸರ್ಕಾರದ ಮೇಲಿದೆ, ಆದರೆ ಆಗ ದೊಡ್ಡ ದೊಡ್ಡ ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯ ಬಜೆಟ್ ನಲ್ಲಿ ಈ ಬಾಬತ್ತಿಗೆ ಹಣವನ್ನು ಮೀಸಲಿಟ್ಟಿಲ್ಲ ಎಂದು ಬೊಮ್ಮಾಯಿ ಹೇಳಿದರು.