ಕೋಲಾರ:- ವಿವಿಧ ಬೇಡಿಕೆ ಈಡೇರಿಸದ ಆಡಳಿತ ಮಂಡಳಿ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರ ಮೇಲೆ ಹೊರಗಿನವರಿಂದ ಹಲ್ಲೆ ಆರೋಪ ಕೇಳಿ ಬಂದಿರುವ ಘಟನೆ ಕೋಲಾರದ ವೇಮಗಲ್ ಕೈಗಾರಿಕಾ ವಲಯದಲ್ಲಿ ಜರುಗಿದೆ.
ಮಹಿಂದ್ರಾ ಏರೋಸ್ಪೇಸ್ ಕಾರ್ಖಾನೆ ಎದುರು ಕಾರ್ಮಿಕರು ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ೧೫ ದಿನಗಳಿಂದ ಪ್ರತಿದಿನ ತಮ್ಮಪಾಳಿ ಆರಂಭಕ್ಕೂ ಮುನ್ನ ಪ್ರತಿಭಟನೆ ನಡೆಯುತ್ತಿದ್ದು, ನಂತರ ಯತಾ ಪ್ರಕಾರ ತಮ್ಮ ಕರ್ಥವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಇಂದು ರೌಡಿಗಳಿಂದ ನಮ್ಮಮೇಲೆ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿರುವ ಕಾರ್ಮಿಕರು ವೇಮಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತಿಕ್ಕಾಟ ಮುಂದುವರಿದಿದೆ.