ಚಾಮರಾಜನಗರ:- ನಗರದ ಎಸ್.ಸಿ ಮೀಸಲು ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಗೆ ಮಾಜಿ ಸಚಿವ ಎನ್.ಮಹೇಶ್ ಬೆಂಬಲ ಸೂಚಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದೆ. ರಾಜ್ಯದ ವೀಕ್ಷಕರ ಅಭಿಪ್ರಾಯ ಸಂಗ್ರಹದಲ್ಲೂ ಸ್ಥಳೀಯರ ಪರ ಒಲವು ವ್ಯಕ್ತವಾಗಿತ್ತು. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿ ಬಾಲರಾಜ್ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಬಾಲರಾಜ್ ನನ್ನ ಪರ ಕೆಲಸ ಮಾಡಿದ್ದರು
ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಪರ ಒಲವಿದೆ. ಕಳೆದ ಬಾರಿ ವಿ.ಶ್ರೀನಿವಾಸ್ ಪ್ರಸಾದ್ ಹೋರಾಟ ಮಾಡಿ ಬಿಜೆಪಿಗೆ ಮೊದಲ ಗೆಲುವು ತಂದು ಕೊಟ್ಟಿದ್ದರು. ಈ ಬಾರಿ ನಾವು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ. ಆ ಗೆಲುವನ್ನು ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಅರ್ಪಿಸುತ್ತೇವೆ ಎಂದು ಎನ್.ಮಹೇಶ್ ಹೇಳಿಕೆ ನೀಡಿದ್ದಾರೆ.