ಹರಿಯಾಣ:- ‘ಬಾಯ್ಲರ್ ಸ್ಪೋಟ’ಗೊಂಡು ಭೀಕರ ದುರಂತ ಸಂಭವಿಸಿದ ಘಟನೆ ಹರಿಯಾಣದಲ್ಲಿ ಜರುಗಿದ್ದು, 100ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಜರುಗಿದೆ.
ಘಟನೆಯಲ್ಲಿ ಸುಮಾರು ಮಂದಿ ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬಾಯ್ಲರ್ ಸ್ಪೋಟದಲ್ಲಿ ಗಾಯಗೊಂಡಿರುವಂತ ಕೆಲವರ ಸ್ಥಿತಿ ಗಂಭೀರವಾಗಿದ್ದು, ಏತನ್ಮಧ್ಯೆ, ರೋಹ್ಟಕ್ ಪಿಜಿಐಎಂಎಸ್ ನಿರ್ದೇಶಕ ಡಾ.ಎಸ್.ಎಸ್.ಲೋಹ್ಚಾಬ್, ಆಘಾತ ಕೇಂದ್ರದ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೇ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದ್ದಾರೆ.
ಸಂಜೆ 7 ಗಂಟೆ ಸುಮಾರಿಗೆ ಲೈಫ್ ಲಾಂಗ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ನಂತರ ಹಲವಾರು ಅಗ್ನಿಶಾಮಕ ಎಂಜಿನ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಕಾರ್ಖಾನೆಗೆ ಆಗಮಿಸಿ, ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎನ್ನಲಾಗಿದೆ.