ಕಲಬುರಗಿ : 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇರಿಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಬಹಳಷ್ಟು ಭಾಷಣ ಮಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದಾರೆ. ನಾವು ಶೇ.17ರಷ್ಟು ಮಧ್ಯಂತರ ಪರಿಹಾರ ಕೊಟ್ಟಿದ್ದೇವು ಎಂದು ಹೇಳಿದರು.
ಪಿಯುಸಿ ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹63,000 ಸಂಬಳ! ಈಗಲೇ ಅರ್ಜಿ ಸಲ್ಲಿಸಿ
ಸಿದ್ದರಾಮಯ್ಯನವರಿಗೆ ಮಾರ್ಚ್ ಏಪ್ರಿಲ್ನಲ್ಲಿ 7ನೇ ವೇತನ ಆಯೋಗದ ವರದಿ ಬರುತ್ತದೆ ಅಂತ ಗೊತ್ತಿದ್ದರೂ ಕೂಡಾ ಬಜೆಟ್ನಲ್ಲಿ ಯಾವುದೇ ಹಣ ಮೀಸಲಿಡದೇ. ಸರ್ಕಾರಿ ನೌಕರರಿಗೆ ಮೂಗಿಗೆ ತುಪ್ಪ ಒರಿಸುವ ಕೆಲಸ ಮಾಡಿದ್ದಾರೆ. ವರದಿ ಜಾರಿ ಆಗುತ್ತದೆಯೋ ಇಲ್ಲವೋ ಕಾದು ನೋಡಬೇಕು. 7ನೇ ವೇತನ ಆಯೋಗದ ವರದಿ ರೆಡಿಯಾಗಿತ್ತು, ಆದರೂ ಆರು ತಿಂಗಳು ಕಾಲಾವಕಾಶ ನೀಡಿದರು. ಈಗ ನೀತಿ ಸಂಹಿತೆ ಜಾರಿ ಆಗುತ್ತಿದೆ. ಆಮೇಲೆ ಮಾಡೋಣ ಅಂತ ಹೇಳುವುದು ಗೊತ್ತಿರುವ ವಿಚಾರ ಎಂದು ಹೇಳಿದರು.