ಬೆಂಗಳೂರು:- ಕಾಂಗ್ರೆಸ್ ಇರುವ ಕಡೆ ದುಷ್ಕೃತ್ಯಗಳಿಗೆ ಬೆಂಬಲ ಸಿಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ದೇಶದಲ್ಲಿ ಬಿಜೆಪಿ ಗಟ್ಟಿಯಾಗಿದೆ. 10 ವರ್ಷದಿಂದ ಉಗ್ರರ ದಾಳಿಗೆ ಬಲಿಯಾದವರು ಕಡಿಮೆ ಎಂದರು. ಇವತ್ತು ಬೆಂಗಳೂರಿನಲ್ಲಿ 70 ಕಿ.ಮೀ. ಮೆಟ್ರೋ ಅಭಿವೃದ್ಧಿ ಆಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ
ಬೆಂಗಳೂರು ದಕ್ಷಿಣ ಈ ಬಾರಿ ಇತಿಹಾಸ ನಿರ್ಮಿಸಲಿದೆ. ಕಳೆದ ಬಾರಿ ಬೆಂಗಳೂರಿನ ಇತಿಹಾಸದಲ್ಲಿ ಅತೀ ಹೆಚ್ಚು ಅಂತರದಿಂದ ಗೆದ್ದಿದ್ದೆವು. ಈ ಬಾರಿ ಸುಮಾರು 5 ಲಕ್ಷ ಅಂತರದಿಂದ ಗೆಲ್ಲುತ್ತೇವೆ ಎಂದು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಭರವಸೆ ನೀಡಿದ್ದಾರೆ.
ಬಿ ವೈ ವಿಜಯೇಂದ್ರ ಅವರು ರಾಜ್ಯ ಅಧ್ಯಕ್ಷರಾದ ನಂತರ ಕಾರ್ಯಕರ್ತರಲ್ಲಿ ಸ್ಫೂರ್ತಿ ಮೂಡಿದೆ. ಅದೇ ರೀತಿ ಸಿ.ಕೆ ರಾಮಮೂರ್ತಿ ಅವರು ಜಿಲ್ಲಾಧ್ಯಕ್ಷರಾದ ಬಳಿಕ ಬೆಂಗಳೂರು ದಕ್ಷಿಣದಲ್ಲಿ ಸಂಘಟನೆಯನ್ನು ಗಟ್ಟಿ ಮಾಡುವ ಕೆಲಸವಾಗಿದೆ ಎಂದಿದ್ದಾರೆ.
ನನ್ನೆಲ್ಲಾ ಬಿಜೆಪಿ ಕಾರ್ಯಕರ್ತರ ಸಹಕಾರದೊಂದಿಗೆ, ಪ್ರೀತಿ ಹಾಗೂ ಬಲದೊಂದಿಗೆ ಈ ಬಾರಿ ಅತೀ ಹೆಚ್ಚು ಅಂತರದಿಂದ ಚುನಾವಣೆ ಗೆಲ್ಲಲಿದ್ದೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.