ಬೆಂಗಳೂರು: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ನೀಡಬೇಕು. ಇಲ್ಲವಾದರೆ ನಾವು ಮತದಾನ ಬಹಿಷ್ಕಾರ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದೇವೆ ಎಂದು ಕಾಶಪ್ಪನವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಮುಂದೆ ಬಂದು ಪ್ರತಿಭಟನೆ ಮಾಡಿ ಸವಾಲು ಹಾಕಿದ್ದಾರೆ.
BJP ಅಭ್ಯರ್ಥಿ ಇಲ್ಲ ಅಂತಾನೇ ಒಡೆಯರ್ʼನ್ನ ಕಣಕ್ಕಿಳಿಸಿದ್ದಾರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ!
ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೂ ಮುನ್ನ ಟಿಕೆಟ್ಗಾಗಿ ಒತ್ತಡ ಹೆಚ್ಚಾಗಿದೆ. ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ವೀಣಾ ಕಾಶಪ್ಪನವರ್ ಗೆ ಲೋಕಸಭೆ ಟಿಕೆಟ್ ನೀಡುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಸೋಮವಾರ ಬೆಳಗ್ಗೆ ಜಮಾಯಿಸಿದ ಕಾರ್ಯಕರ್ತರು ವೀಣಾ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.(ಶಾಲಿ)
ಸದ್ಯ ಬಾಗಲಕೋಟೆ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂಬುದು ಇನ್ನೂ ಘೋಷಣೆ ಆಗಿಲ್ಲ. ಆದರೆ, ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬರುತ್ತಿದೆ. ಹೀಗಾಗಿ, ಸಂಯುಕ್ತ ಪಾಟೀಲ್ಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು. ಲಿಂಗಾಯತ ಪಂಚಮಸಾಲಿ ಸಮುದಾಯದ ವೀಣಾ ಕಾಶಪ್ಪನವರ್ಗೆ ಟಿಕೆಟ್ ನೀಡುವಂತೆ ಆಗ್ರಹಿಸಲಾಗುತ್ತಿದೆ ಎಂದು ವೀಣ ಕಾಶಪ್ಪನವರ್ ತಿಳಿಸಿದ್ದಾರೆ.