ಬೆಂಗಳೂರು:- ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಇಂದು ಚೆನ್ನೈಗೆ ತೆರಳಲಿದ್ದಾರೆ.
ಈ ಹಿನ್ನೆಲೆ “x” ಮಾಡಿರುವ ಪರಿಷತ್ ಸದಸ್ಯ ಶರವಣ ಅವರು, ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹಾರೈಸಿದ್ದಾರೆ.
ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಚೆನ್ನೈ ಗೆ ತೆರಳುತ್ತಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಶೀಘ್ರವೇ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು X ನಲ್ಲಿ ಟಿಎ ಶರವಣ ಅವರು ಬರೆದುಕೊಂಡಿದ್ದಾರೆ.
ರಾಜ್ಯದ ಮಾಜಿ ಮುಖ್ಯಮಂತ್ರಿ,
ಬಡವರ ಬಂಧು , ಯುವಕರ ಆಶಾಕಿರಣ..
@hd_kumaraswamy ಅವರು ಬೇಗ
ಗುಣಮುಖರಾಗಿ ಬರಲೆಂದು ನನ್ನ ಆರಾಧ್ಯ ದೈವ ಶಿರಡಿ ಸಾಯಿಬಾಬಾ ಹಾಗೂ ನಾಡ ಅಧಿದೇವತೆ
ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ.#TASHARAVANA pic.twitter.com/AGVutXKepM— Sharavana TA (@SharavanaTa) March 19, 2024
ಇನ್ನೂ ಇಂದು ಚೆನ್ನೈ ಗೆ ತೆರಳಲಿರುವ ಹೆಚ್ ಡಿ ಕುಮಾರಸ್ವಾಮಿ ಅವರು, ಆರೋಗ್ಯ ತಪಾಸಣೆ, ಪರೀಕ್ಷೆಗಳ ನಂತರ ಮಾರ್ಚ್ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಚಿಕಿತ್ಸೆ ಬಳಿಕ ಮಾರ್ಚ್ 24ರ ವರೆಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಚೆನ್ನೈನಿಂದ ವಾಪಸ್ ಆದ ನಂತರ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ.ಹಾಸನ, ಮಂಡ್ಯ, ಕೋಲಾರ ಕ್ಷೇತ್ರದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಅಭ್ಯರ್ಥಿಗಳ ಹೆಸರನ್ನು ಕೂಡ ಪ್ರಕಟಿಸಲಿದ್ದಾರೆ.