ಚಿಕ್ಕೋಡಿ: ರಮೇಶ್ ಕತ್ತಿ ಅವರೊಂದಿಗೆ ಈವರೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಮಾತುಕತೆ ಆಗಿಲ್ಲ ಎಂದು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಬಂದ್ರೆ ಸ್ವಾಗತ ಮಾಡುತ್ತೇವೆ ಹಾಗೂ ಅವರ ಆಗಮನದ ಬಗ್ಗೆ ಕಾರ್ಯಕರ್ತರ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.
Breaking News: ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಕೇಸ್ – ಐವರು ಅರೆಸ್ಟ್!
ಈ ಭಾಗದ ಸೂಕ್ತ ಅಭ್ಯರ್ಥಿಗಳ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ, ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕಾಗವಾಡ ಶಾಸಕ ರಾಜು ಕಾಗೆ ಸೇರಿದಂತೆ ಚಿಕ್ಕೋಡಿ ಭಾಗದ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದೇವೆ. ರಮೇಶ್ ಕತ್ತಿ ಅವರೊಂದಿಗೆ ಈವರೆಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಮಾತುಕತೆ ಆಗಿಲ್ಲ. ರಮೇಶ್ ಕತ್ತಿ ಜೊತೆಗೆ ಯಾರೇ ಪಕ್ಷಕ್ಕೆ ಬಂದ್ರು ನಾನು ಸ್ವಾಗತ ಮಾಡುತ್ತೇವೆ, ನಮ್ಮ ನಡೆ ಗೆಲ್ಲುವ ಕಡೆ ಇದೆ ಎಂದು ತಿಳಿಸಿದರು.
ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಪೈನಲ್ ಆಗಿಲ್ಲ: ಪ್ರಿಯಾಂಕಾ ಜಾರಕಿಹೊಳಿ ಚಿಕ್ಕೋಡಿ ಲೋಕಸಭೆಗೆ ಚುನಾವಣೆಗೆ ನಿಲ್ಲಿಸುವ ವಿಚಾರವಾಗಿ ಕಾರ್ಯಕರ್ತರು ಹಾಗೂ ನಾಯಕರ ಸಭೆ ಮಾಡುತ್ತಿದ್ದೇವೆ. ಅಂತಿಮ ಹಂತದ ಅಭ್ಯರ್ಥಿ ಆಯ್ಕೆ ಕುರಿತು ನಮ್ಮ ನಾಯಕರ ಸಭೆ ಮಾಡುತ್ತಿದ್ದೇನೆ. ಇಂದು ಮತ್ತು ನಾಳೆ ಎರಡು ದಿನ ಸಭೆ ಮಾಡುತ್ತೇನೆ ಎಂದರು.