ತುಮಕೂರು: ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಭಿನ್ನಮತ ಬಿಜೆಪಿಯನ್ನು ಸುಡುತ್ತಿದೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದ್ದು, ಕೆಲವರು ಪಕ್ಷ ತೊರೆಯಲು ಸಿದ್ಧತೆ ನಡೆಸುತ್ತಿದ್ದಾರೆ. ತುಮಕೂರಲ್ಲಿ ವಿ ಸೋಮಣ್ಣ ಅವರಿಗೆ ಟಿಕೆಟ್ ನೀಡಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ನಾಯಕ, ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಮಾಧುಸ್ವಾಮಿ ಅಸಮಧಾನವನ್ನೇ ಕಾಂಗ್ರೆಸ್ ನಾಯಕರು ಬಂಡವಾಳ ಮಾಡಿಕೊಂಡಿದ್ದಾರೆ.
Grama panchayat jobs: ಪರೀಕ್ಷೆ ಇಲ್ಲದೆ ನೇರ ನೇಮಕಾತಿ..!ಜಸ್ಟ್ PUC ಪಾಸಾದರೆ ಸಾಕು – ತಿಂಗಳಿಗೆ ₹63,000 ಸಂಬಳ.!
ಆದ್ದರಿಂದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ತುರುವೇಕೆರೆ ಮಸಾಲೆ ಜಯರಾಮ್ ತೋಟದ ಮನೆಯಲ್ಲಿ ಸಭೆ ನಡೆಸಲಾಯಿತು. ಆರ್.ಗೋಪಾಲಯ್ಯ, ಕುಣಿಗಲ್ ಡಿ.ಕೃಷ್ಣಕುಮಾರ್ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿ ನಡೆದಿದ್ದು, ಮಾಧುಸ್ವಾಮಿ ಮನವೊಲಿಕೆಗೆ ಅವಿರತ ಪ್ರಯತ್ನ ಮಾಡಿದ್ದಾರೆ. ಇನ್ನೂ ಬೆಂಬಲಿಗರ ಸಭೆ ಕರೆದು ತೀರ್ಮಾನ ಮಾಡುವುದಾಗಿ ಮಾಧುಸ್ವಾಮಿ ನಿರ್ಧಾರ ಮಾಡಿದ್ದು, ಸಭೆಯ ನಿರ್ಧಾರದ ಬಳಿಕ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ.