ಬೆಂಗಳೂರು: ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾದ ಹಿಂದೂಸಂಘಟನೆಗಳು ಹೀಗಾಗಿ ಇಂದು ಮಧ್ಯಾಹ್ನ 12.00 ಘಂಟೆಗೆ ಸಮಸ್ತ ಹಿಂದೂ ಬಾಂಧವರೆಲ್ಲರೂ ಸೇರಿ, ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಪಾಲ್ಗೊಳೋಣ ಎಂದು ಕರೆ ನೀಡಿದರು.
ದೇಶದ ಅಭಿವೃದ್ಧಿಗೆ ನಾವು ಹೆಚ್ಚು ಸ್ಥಾನ ಗೆಲ್ಲಿಸಿ, ಕರ್ನಾಟಕದಿಂದ ಗಿಫ್ಟ್ ಕೊಡಬೇಕು: ನಿಖಿಲ್ ಕುಮಾರಸ್ವಾಮಿ!
ಜೆ. ಎಂ ರೋಡ್ ನಿಂದ ನಗರತ್ ಪೇಟೆ ವರೆಗಿನ ಎಲ್ಲ ರಸ್ತೆಗಳಲ್ಲಿ, ಹನುಮಾನ್ ಚಾಲೀಸಾ & ಹನುಮ ಭಜನೆಯೊಂದಿಗೆ, ಹಿಂದೂಗಳ ಆತ್ಮಸ್ಥೈರ್ಯ ಗಟ್ಟಿ ಮಾಡುವ ನಿಟ್ಟಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ತಾವುಗಳು ಬಂದು ಭಾಗವಹಿಸಿ. ಈ ಮೆರವಣಿಗೆಯನ್ನು ಯಶಸ್ವಿಗೊಳಿಸೋಣ.
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಶ್ರೀ ಸಿ ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರ ಶ್ರೀ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಳ್ಳುತ್ತಾರೆ