ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಭಾರೀ ವಿವಾದ ಸೃಷ್ಟಿಸಿರುವ ‘ಶಕ್ತಿ’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ರಾಗಾ, ಮೋದಿ ವಿರುದ್ಧ ವಾಗ್ದಾಳಿಗಳನ್ನು ನಡೆಸಿದ್ದಾರೆ. ಅವರು ನನ್ನ ಹೇಳಿಕೆಗಳನ್ನು ತಿರುಚಿ, ಅದರ ಅರ್ಥ ಬದಲಾಯಿಸಲು ಪ್ರಯತ್ನಿಸುತ್ತಾರೆ. ಯಾಕೆಂದರೆ ನಾನು ಸತ್ಯವನ್ನೇ ನುಡಿದಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಎಕ್ಸ್ನಲ್ಲೇನಿದೆ..?: ಮೋದಿಯವರು ನನ್ನ ಮಾತುಗಳನ್ನು ಇಷ್ಟಪಡುವುದಿಲ್ಲ. ಅವರು ಯಾವಾಗಲೂ ನನ್ನ ಹೇಳಿಕೆಗಳನ್ನು ಯಾವುದೋ ಒಂದು ರೀತಿಯಲ್ಲಿ ತಿರುಚಿ ಅವುಗಳ ಅರ್ಥವನ್ನು ಬದಲಾಯಿಸಲು ಪ್ರಯತ್ನಿಸುತ್ತಾರೆ. ಏಕೆಂದರೆ ನಾನು ಗಾಢವಾದ ಸತ್ಯವನ್ನು ಹೇಳಿದ್ದೇನೆ ಎಂದು ಅವರಿಗೆ ಕೂಡ ತಿಳಿದಿದೆ. ನಾನು ಹೇಳಿದ ಶಕ್ತಿ, ನಾವು ಹೋರಾಡುತ್ತಿರುವ ಶಕ್ತಿ, ಆ ಶಕ್ತಿಯ ಮುಖವಾಡ ಮೋದಿಯವರಾಗಿದ್ದಾರೆ. ಅಂತಹ ಶಕ್ತಿಯೇ ಇಂದು ಭಾರತದ ಧ್ವನಿಯನ್ನು ಸೆರೆಹಿಡಿದಿದೆ.
Coconut Sugar: ಬಿಳಿ ಸಕ್ಕರೆಗಿಂತ ತೆಂಗಿನಕಾಯಿ ಸಕ್ಕರೆ ಆರೋಗ್ಯಕ್ಕೆ ಒಳ್ಳೆಯದಾ..? ಇಲ್ಲಿದೆ ಉತ್ತರ
ಭಾರತದ ಸಂಸ್ಥೆಗಳು, ಸಿಬಿಐ, ಐಟಿ, ಇಡಿ, ಚುನಾವಣಾ ಆಯೋಗ, ಮಾಧ್ಯಮಗಳು, ಭಾರತೀಯ ಉದ್ಯಮ ಮತ್ತು ಭಾರತದ ಸಂಪೂರ್ಣ ಸಾಂವಿಧಾನಿಕ ರಚನೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅಧಿಕಾರಕ್ಕಾಗಿ ನರೇಂದ್ರ ಮೋದಿಯವರು ಭಾರತೀಯ ಬ್ಯಾಂಕ್ಗಳ ಸಾವಿರಾರು ಕೋಟಿ ಸಾಲವನ್ನು ಮನ್ನಾ ಮಾಡುತ್ತಾರೆ. ಆದರೆ ಭಾರತೀಯ ರೈತ ಕೆಲವೇ ಕೆಲವು ಸಾವಿರ ರೂಪಾಯಿಗಳ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ.
ಅದೇ ಅಧಿಕಾರವನ್ನು ಭಾರತದ ಬಂದರುಗಳು, ಭಾರತದ ವಿಮಾನ ನಿಲ್ದಾಣಗಳನ್ನು ನೀಡಲಾಗುತ್ತದೆ. ಆದರೆ ಭಾರತದ ಯುವಕರಿಗೆ ಅಗ್ನಿವೀರನ ಉಡುಗೊರೆಯನ್ನು ನೀಡಲಾಗುತ್ತದೆ. ಅದು ಅವರ ಧೈರ್ಯವನ್ನು ಕಸಿಯುತ್ತದೆ. ಅದೇ ಶಕ್ತಿಗೆ ಹಗಲಿರುಳು ಸೆಲ್ಯೂಟ್ ಹೊಡೆಯುತ್ತಲೇ ದೇಶದ ಮಾಧ್ಯಮಗಳು ಸತ್ಯವನ್ನು ಹತ್ತಿಕ್ಕುತ್ತವೆ.