ದೆಹಲಿ:- ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಮನ್ಸ್ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಲಿದೆ. ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗುರುವಾರ, ಅಂದರೆ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ಗೆ ಭಾನುವಾರ ಕೇಂದ್ರ ಸಂಸ್ಥೆ ಒಂಬತ್ತನೇ ಸಮನ್ಸ್ ಜಾರಿ ಮಾಡಿತ್ತು.
ಪ್ರಕರಣದಲ್ಲಿ ಹಿಂದಿನ ಎಂಟು ಸಮನ್ಸ್ಗಳಲ್ಲಿ 6ಕ್ಕೆ ಕೇಜ್ರಿವಾಲ್ ಗೈರಾಗಿದ್ದು, ಇಡಿ ಅವರ ವಿರುದ್ಧ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯವು ದೆಹಲಿ ಸಿಎಂಗೆ ಜಾಮೀನು ನೀಡಿದ ಒಂದು ದಿನದ ನಂತರ ಸಮನ್ಸ್ ಜಾರಿಗೊಳಿಸಲಾಗಿದೆ.
ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಸಮನ್ಸ್ಗೆ ಹಾಜರಾಗದ ಕಾರಣ ಅವರ ವಿಚಾರಣೆಗೆ ಕೋರಿ ಇಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಲ್ಲಿಸಿದ ಚಾರ್ಜ್ ಶೀಟ್ಗಳಲ್ಲಿ ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ಸಿದ್ಧಪಡಿಸುವ ಕುರಿತು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಸಂಸ್ಥೆ ಹೇಳಿದೆ.