ಬೆಂಗಳೂರು:- ಸಿಎಸ್ಆರ್ ನಿಧಿ ಮೊರೆ ಹೋದ ಜಲಮಂಡಳಿಯು ಮಳೆ ನೀರು ಕೋಯ್ಲು ಅಳವಡಿಕೆಗೆ ಒತ್ತು ನೀಡಿದೆ.
ಭವಿಷ್ಯದ ದೃಷ್ಟಿಯಿಂದ ಕಂಡುಕೊಂಡಿರುವ ಹಲವು ಪರ್ಯಾಯ ಮೂಲಗಳ ಪೈಕಿ ಮಳೆ ನೀರು ಕೊಯ್ಲು ಅವಳವಡಿಕೆಯೂ ಒಂದಾಗಿದೆ. ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸವ ಮೂಲಕ ಸಾರ್ವತ್ರೀಕರಣಗೊಳಿಸಲು ಜಲಮಂಡಳಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ನೀರು ಕೊಯ್ಲು ಅಳವಡಿಸಲು ಹಾಗೂ ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಲು ಮತ್ತು ಇನ್ನಿತರ ಯೋಜನೆಗಳಿಗೆ ಖರ್ಚು ಮಾಡಲು ಜಲಮಂಡಳಿ ಸಿಎಸ್ಆರ್ ನಿಧಿ (CSR) ಮೊರೆ ಹೋಗಿದೆ.
ಬಿಡಬ್ಲೂಎಸ್ಎಸ್ಬಿ ಸಂಪೂರ್ಣವಾಗಿ ಜನರಿಂದ ಸಂಗ್ರಹಿಸಿದ ತೆರಿಗೆ ಮೇಲೆ ಕಾರ್ಯ ನಿರ್ವಹಿಸುತ್ತದೆ. ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ತೆರಿಗೆ ಹಣ ಸಾಕಾಗುವುದಿಲ್ಲ. ಮತ್ತು ಮಂಡಳಿಯಲ್ಲಿ ಅಷ್ಟೊಂದು ಹಣವಿಲ್ಲ. ಬೆಂಗಳೂರು ನಗರ ಒಳಿತಿಗಾಗಿ ಹಲವು ಕಂಪಿನಗಳು ಸಿಎಸ್ಆರ್ ನಿಧಿ ಮೂಲಕ ಹಣ ನೀಡಲು ಮುಂದೆ ಬಂದಿವೆ. ಹೀಗಾಗಿ ನಾವು ಆ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇವೆ ಎಂದು ಜಲಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಗರದಲ್ಲಿ ಅಂತರ್ಜಲ ಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಈ ಎಲ್ಲ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಹವಾಮಾನದಲ್ಲಿ ಆದ ಬದಲಾವಣೆಯಿಂದ ಈ ಬಾರಿ ಮಳೆ ಕಡಿಮೆಯಾಗಿದೆ. ಇದರಿಂದ ಅಂತರ್ಜಲ ಮಟ್ಟ ಕುಸಿದಿದೆ. ಇದರಿಂದ ನೀರಿಲ್ಲದೆ ಪರದಾಡುವಂತಾಗಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ತೊಂದರೆಯಾಗಿದೆ. ಇದು ಬೆಂಗಳೂರು ಜನರಿಗೆ ಎಚ್ಚರಿಕೆ ಗಂಟೆಯಾಗಿದೆ. ಹೀಗಾಗಿ ನೈಸರ್ಗಿಕವಾಗಿ ನೀರು ಇಂಗುವಂತೆ (ಕೆರೆಗಳನ್ನು ಉಳಿಸಿಕೊಳ್ಳುವುದು) ಮತ್ತು ಮಳೆ ನೀರು ಕೋಯ್ಲು ಹೆಚ್ಚು ಅವಶ್ಯಕವಾಗಿದೆ. ಈ ಮಳೆ ನೀರು ಕೊಯ್ಲು ನಿರ್ಮಾಣ ಹೂಡಿಕೆಗೆ ಜಲ ಮಂಡಳಿ ಖಾಸಗಿ ಕಂಪನಿಗಳ ಮೊರೆ ಹೋಗಿದೆ.