ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಮಂಗಳವಾರ ಡಿಕೆಶಿ ಬ್ರದರ್ಸ್ ವಿರುದ್ಧ ಕುಕ್ಕರ್ ಆರೋಪ ವಿಚಾರ ಬಗ್ಗೆ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಾನು ಯಾರಿಗೂ ವಿಷ ಹಾಕುವವರಲ್ಲ. ನಾನು ಎಲ್ಲರಿಗೂ ಒಳ್ಳೆಯದನ್ನ ಬಯಸುವವರು ಎಂದು ಹೇಳುವ ಮೂಲಕ ಹೆಚ್ ಡಿ ಕುಮಾರಸ್ವಾಮಿಗೆ (HD Kumaraswamy) ಸಂಸದ ಡಿ.ಕೆ ಸುರೇಶ್ (DK Suresh) ತಿರುಗೇಟು ನೀಡಿದ್ದಾರೆ.
ಸಿಎಸ್ಆರ್ ನಿಧಿ ಮೊರೆ ಹೋದ ಜಲಮಂಡಳಿ – ಮಳೆ ನೀರು ಕೋಯ್ಲು ಅಳವಡಿಕೆಗೆ ಒತ್ತು!
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಹಂಚಿಕೆ ಆರೋಪದ ಕುರಿತು ಮಾತನಾಡಿ, ಈ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಕುಮಾರಸ್ವಾಮಿ ಏನೇನ್ ಹೇಳ್ತಾರೋ ಗೊತ್ತಿಲ್ಲ. ಅವರಿಗೆ ಆಪರೇಷನ್ ಆಗಬೇಕು ಅಂತ ಆಸ್ಪತ್ರೆಗೆ ಹೋಗ್ತಿದ್ದಾರೆ, ಒಳ್ಳೆದಾಗ್ಲಿ ಎಂದರು.
ಕೆಲವರು ಅವಾಗವಾಗ ಪ್ರಚಾರದಲ್ಲಿ ಇರಬೇಕು ಅಂತ ಏನೇನೊ ಮಾಡ್ತಿರ್ತಾರೆ ಸದ್ಯಕ್ಕೆ ಕುಮಾರಸ್ವಾಮಿ ಆರೋಗ್ಯ ಸರಿಯಿಲ್ಲ ಅಂತ ಆಸ್ಪತ್ರೆಗೆ ದಾಖಲಾಗಿದ್ದಾರೆ, ಅವರು ಗುಣಮುಖರಾಗಲಿ ಅಂತ ಭಗವಂತನಲ್ಲಿ ಪ್ರಾರ್ಥನೆ ಮಾಡ್ತೀನಿ ಆಮೇಲೆ ಬಂದ್ಮೇಲೆ ರಾಜಕೀಯ ಪ್ರಶ್ನೆಗಳಿಗೆ ಉತ್ತರ ಕೊಡೋಣ ಅವರಿಗೆ ದೇವರು ಒಳ್ಳೇದು ಮಾಡಲಿ, ರಾಜಕಾರಣದಲ್ಲಿ ಎದುರಾಳಿಗಳು ಸ್ಟ್ರಾಂಗ್ ಆಗಿ ಇರಬೇಕು ಅವರನ್ನು ನಾನು ವೆಲ್ ಕಮ್ ಮಾಡ್ತೀನಿ ಎಂದು ಹೇಳಿದರು.