ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬರುವುದು ವಿಶ್ವಾಸ ಇದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆ ಸಹಜ, ಸ್ಪರ್ಧೆ ಆರೋಗ್ಯಕರವಾಗಿರಬೇಕು ಎಂದು ಹೇಳಿದರು.
Loksabha Election: ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ತಯಾರಿ: ಕರ್ನಾಟಕಕ್ಕೆ ರಾಹುಲ್ ಗಾಂಧಿ ಕರೆಸಲು ಪ್ಲ್ಯಾನ್!?
ಕುಕ್ಕರ್ ಹಂಚಿಕೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಸುದ್ದಿಗೋಷ್ಟಿ ಮಾಡಿದ್ದಾರೆ. ಈಗಾಗಲೇ ಏನಾಗ್ತಿದೆ ಅಂತ ಗೊತ್ತಿದೆ. ಪ್ರತೀ ಬಾರಿ ಚುನಾವಣೆ ಸಹಜ, ಆದ್ರೆ, ಆರೋಗ್ಯಕರ ಸ್ಪರ್ಧೆ ಆಗಬೇಕು. ಪ್ರಜಾತಂತ್ರ ವ್ಯವಸ್ಥೆಗೆ ಅರ್ಥ ಇರಬೇಕು. ಸ್ಪರ್ಧೆ ಆರೋಗ್ಯಕರ ಆಗಿರಬೇಕು ಅನ್ನೋದು ನನ್ನ ಆಶಯ ಎಂದು ಅಭಿಪ್ರಾಯಪಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ನೋಡಿ ಬಿಜೆಪಿ, ಎನ್ಡಿಎ ಪರ ಅಲೆ ಇದೆ. ಇದು ಹ್ಯಾಟ್ರಿಕ್ ಅಂತ ಹೇಳಬಹುದು. ಮೂರನೇ ಬಾರಿ ಮೋದಿಯವರು ವಿಜಯ ಸಾಧಿಸಲಿದ್ದಾರೆ. 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ನಮ್ಮೆಲ್ಲರ ಆಶಯ ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಎಂದು ಡಾ. ಮಂಜುನಾಥ್ ತಿಳಿಸಿದರು.