ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ (Mekedatu Project) ತಡೆ ಒಡ್ಡುವುದಾಗಿ ಡಿಎಂಕೆ ಘೋಷಣೆ ಮಾಡಿದೆ. ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ (Tamil Nadu) ಆಡಳಿತ ನಡೆಸುತ್ತಿರುವ ಸ್ಟಾಲಿನ್ (CM Stalin) ನೇತೃತ್ವದ ಡಿಎಂಕೆ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಕಾವೇರಿ ನದಿಗೆ (Cauvery Water) ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ನಿರ್ಮಾಣಕ್ಕೆ ತಡೆ ಒಡ್ಡುವುದಾಗಿ ಹೇಳಿದೆ.
ನಿಮಗೆ ಗೊತ್ತೇ.? ಡಿಪ್ರೆಶನ್ʼನಿಂದ ಹೊರಬರಲು ಜಾಗಿಂಗ್, ಯೋಗ ಮಾಡಿದ್ರೆ ಸಾಕಂತೆ
INDIA ಒಕ್ಕೂಟದಲ್ಲಿ ಕಾಂಗ್ರೆಸ್ (Congress) ಪ್ರಧಾನ ಪಕ್ಷವಾಗಿದ್ದು ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರವೇ ಅಧಿಕಾರ ನಡೆಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೊದಲು ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಸಹ ನಡೆಸಿತ್ತು. ಈಗ ಮೈತ್ರಿ ಭಾಗವಾಗಿರುವ ಡಿಎಂಕೆ ಈ ವಿಚಾರವನ್ನೇ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ.