ಧಾರವಾಡ: ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿ ಸಂಭವಿಸಿದೆ. ನ್ಯಾಯವಾದಿಯೊಬ್ಬರ ಪುತ್ರ ಸಾಯಿರಾಂ (27) ಎಂಬ ಬೈಕ್ ಸವಾರನೇ ಈ ಘಟನೆಯಲ್ಲಿ ಸಾವನ್ನಪ್ಪಿದವನು.
ನಿಮಗೆ ಗೊತ್ತೇ.? ಡಿಪ್ರೆಶನ್ʼನಿಂದ ಹೊರಬರಲು ಜಾಗಿಂಗ್, ಯೋಗ ಮಾಡಿದ್ರೆ ಸಾಕಂತೆ
ಬೈಕ್ ತೆಗೆದುಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು, ಸಾಯಿರಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.