ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ (Uniform Civil Code Bil) ಬೆಂಬಲ ವ್ಯಕ್ತಪಡಿಸಿರುವ ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಖ್ತರ್ (Javed Akhtar), ಇದೇ ವೇಳೆ ಮುಸ್ಲಿಮರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು ಎಂದು ಹಾಸ್ಯ ಮಾಡಿದ್ದಾರೆ. ಹಿಂದೂಗಳು (Hindu) ಅನಧಿಕೃತವಾಗಿ ಇಬ್ಬರು ಪತ್ನಿಯರನ್ನು ಹೊಂದಿರುತ್ತಾರೆ. ಮಾಹಿತಿ ಪ್ರಕಾರ ಇಂತಹವರ ಸಂಖ್ಯೆ ಹೆಚ್ಚಾಗಿಯೇ ಇದೆ.
Maharashtra: ಜಂಕ್ʼಫುಡ್ ಜಾಸ್ತಿ ತಿನ್ನಬೇಡ ಎಂದ ತಂದೆ: ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ
ಹೀಗಾಗಿ ಸಂಹಿತೆಯಲ್ಲಿ ಮುಸ್ಲಿಮರಿಗೆ ಮಾತ್ರ ಬಹುಪತ್ನಿತ್ವ ನಿಷೇಧ ಮಾಡುವುದು ಸರಿಯಲ್ಲ. ನಾನು ಸಮಾನ ಹಕ್ಕು ಮತ್ತು ಕಾನೂನಿನ (Law) ಪರವಾಗಿದ್ದೇನೆ. ನನ್ನ ಮಗ ಮತ್ತು ಮಗಳಿಗೂ ಆಸ್ತಿಯಲ್ಲಿ ಸಮಪಾಲು ನೀಡಿದ್ದೇನೆ. ಹಾಗೆಯೇ ಇದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಮುಸ್ಲಿಮರನ್ನು ಟೀಕಿಸುವುದಕ್ಕೆ ಮಾತ್ರವೇ ಜಾರಿಗೆ ತಂದಂತೆ ಆಗಬಾರದು ಎಂದು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆಯನ್ನು ಘೋಷಣೆ ಮಾಡಿತು