ಬೆಂಗಳೂರು: 2018ರಲ್ಲಿ ತೆರೆಕಂಡ ತಮಿಳಿನ `ಇರುಂಬುತಿರೈ’ (ಕಬ್ಬಿಣದ ಪರದೆಯ ಹಿಂದೆ) (Irumbu Thirai) ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಸೈಬರ್ ವಂಚಕರು ಹೇಗೆಲ್ಲಾ ವಂಚನೆ ಮಾಡಲು ಸಾಧ್ಯವಿದೆ? ಎಂಬುದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. ನಕಲಿ ಸಂದೇಶಗಳನ್ನು ಕಳುಹಿಸಿ ಜನರ ಬ್ಯಾಂಕ್ ಖಾತೆಗಳಿಂದ (Bank Account) ಹೇಗೆ ಹಣ ಎಗರಿಸುತ್ತಾರೆ ಎಂಬುದನ್ನ ತೋರಿಸಲಾಗಿತ್ತು. ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅದೇ ರೀತಿಯ ವಂಚನೆ ಪ್ರಕರಣಗಳು ಮುನ್ನೆಲೆಗೆ ಬರುತ್ತಿವೆ.
BIGG BREAKING: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ಗುಡ್ ಬೈ!
ಹೊಸ ರೂಪದಲ್ಲಿ ಅಗೋಚರ ಶತ್ರುವಿನ ಪ್ರತ್ಯಕ್ಷವಾಗಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಸೈಬರ್ ಖದೀಮರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಚುನಾವಣೆ ಹೊತ್ತಲ್ಲೇ ನಕಲಿ ಮೆಸೇಜ್ಗಳ (Fake Messages) ಹಾವಳಿ ಸಹ ಹೆಚ್ಚಾಗುತ್ತಿವೆ. ಇಲ್ಲಿ ಸ್ವಲ್ಪ ಯಾಮಾರಿದ್ರೂ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಬೀಳೋದು ಗ್ಯಾರಂಟಿ.
ಚುನಾವಣೆ ಸಂದರ್ಭದಲ್ಲಿ ಪ್ರಧಾನಿಗಳ ಫೋಟೋ ಬಳಸಿ ಫೇಕ್ ಮೆಸೇಜ್ ಹರಿಬಿಡಲಾಗುತ್ತಿದೆ. ಎಲ್ಲರ ಖಾತೆಗೆ ಮೋದಿಯವರ ಕಡೆಯಿಂದ 5,000 ರೂಪಾಯಿ ಅನ್ನೋ ಫೇಕ್ ಮೆಸೇಜ್ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ.
5,000 ಪಡೆದಿದ್ದೀರಿ, ಇದನ್ನ ನಿಮ್ಮ ಅಕೌಂಟ್ಗೆ ಹಾಕಲು ಲಿಂಕ್ ಮಾಡಿ ಎಂಬ ಸಂದೇಶ ಕಳುಹಿಸುತ್ತಾರೆ. ಲಿಂಕ್ ಕ್ಲಿಕ್ ಮಾಡಿದರೆ ಕೂಡಲೇ ಖಾತೆಯಿಂದ ಹಣ ಎಗರಿಸುವಂತೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಈಗಾಗಲೇ ಕುರುಡು ಕಾಂಚಾಣದ ಓಡಾಟ ಸಹ ಜೋರಾಗಿರೋದ್ರಿಂದ ಜನರು ಕೂಡ ಸುಲಭವಾಗಿ ಮೋಸದ ಬಲೆಗೆ ಬೀಳ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳುವಂತೆ ಚುನಾವಣಾಧಿಕಾರಿಗಳು (Election Officers) ಹಾಗೂ ಸೈಬರ್ ಅಪರಾಧ ವಿಭಾಗಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದೆ.