ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಸಾಕಷ್ಟು ಚುನಾವಣಾ ಅವ್ಯವಹಾರ ನಡೆಯುತ್ತಿದೆ. ಚುನಾವಣೆಗೆ ಹಂಚೋದಕ್ಕಾಗಿ ಕಾಂಗ್ರೆಸ್ನವರು 8 ಲಕ್ಷ ಕುಕ್ಕರ್ ಸಂಗ್ರಹಿಸಿದ್ದಾರೆ. ಮನೆ-ಮನೆಗಳಿಗೆ ಹೋಗಿ ದುಡ್ಡು ಕೊಡ್ತಿದ್ದಾರೆ. ಈ ಅಕ್ರಮಗಳನ್ನು ತಡೆಯಲು ಪ್ಯಾರಾ ಮಿಲಿಟರಿ ಫೋರ್ಸ್ ಬರಬೇಕು ಎಂದು ಆರ್ಆರ್ ನಗರ ಶಾಸಕ ಮುನಿರತ್ನ ಆಗ್ರಹಿಸಿದ್ದಾರೆ.Namma Metro : ವೈಟ್ ಫೀಲ್ಡ್- ಚಲ್ಲಘಟ್ಟ ಸಂಚಾರ ಸ್ಥಗಿತಗೊಂಡಿದ್ದ ಮೆಟ್ರೋ ಪುನಾರಂಭ!
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ ಸುರೇಶ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆಗೆ ಹಂಚಲು ಕಾಂಗ್ರೆಸ್ನವರು ಕುಕ್ಕರ್, ಸೀರೆ ಸಂಗ್ರಹ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ದಾಳಿ ಮಾಡಿ ವಶಪಡಿಸಿಕೊಳ್ತಿಲ್ಲ. ದಾಳಿ ಮಾಡಿದ್ರೆ ತೊಂದರೆ ಆಗುತ್ತೆ ಅಂತಾ ಹೆದರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಡಾ.ಸಿ.ಎನ್ ಮಂಜುನಾಥ್ ಅವರು ಪ್ರಾಮಾಣಿಕ ವ್ಯಕ್ತಿ, ಅಂತಹ ವ್ಯಕ್ತಿ ನಮ್ಮ ಗ್ರಾಮಾಂತರಕ್ಕೆ ಅಭ್ಯರ್ಥಿಯಾಗಿ ಸಿಕ್ಕಿದ್ದಾರೆ. ಒಳ್ಳೆಯ ರೀತಿಯ ಚುನಾವಣೆ ಮಾಡೋದನ್ನು ಬಿಟ್ಟು, ಇಂತಹ ಕೆಲಸ ಮಾಡ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿಯವರು ಕಂಡರೆ ಹೊಡೆಯಿರಿ ಅಂತ ಕರೆ ಕೊಟ್ಟಿದ್ದಾರೆ. ನಮ್ಮ ಕಾರ್ಯಕರ್ತರ ಮನೆಗೆ ರಾತ್ರೋ ರಾತ್ರಿ ಹೋಗಿ 10-20-25 ಲಕ್ಷ ರೂ. ಕೊಟ್ಟು ಬಲವಂತವಾಗಿ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಕೆಲಸ ಮಾಡ್ತಿದ್ದಾರೆ ಎಂದು ದೂರಿದ್ದಾರೆ