ಬೆಂಗಳೂರು:- ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಧಪಟ್ಟಂತೆ ಸಚಿವೆ ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ FIR ದಾಖಲಾಗಿದೆ.
ನಗರ್ತಪೇಟೆಯಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ಆದರೂ ಸಹ ಮುಖೇಶ್ ಹಲ್ಲೆ ಸಂಬಂಧ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಲಾಗಿದೆ.