ಬೆಂಗಳೂರು:- ಮಗನಿಗೆ ಟಿಕೆಟ್ ಫೈನಲ್!? ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಖುಷಿಯಿಂದ ಬೀಗುತ್ತಲೇ ಅವರು ಇನ್ನೂ ಅಧಿಕೃತ ಘೋಷಣೆ ಆಗಿಲ್ಲ, ತಾವೆಲ್ಲ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಮೀಟಿಂಗ್ ಗೆ ಬನ್ನಿ ಅಂತ ಕರೆಬಂದ ಕಾರಣ, ಹಿರಿಯರ ಆಶೀರ್ವಾದ ಪಡೆಯೋಣ ಅಂತ ಮಗನನ್ನು ಕರೆದುಕೊಂಡು ನಗರಕ್ಕೆ ಬಂದಿರುವುದಾಗಿ ಹೇಳಿದರು. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದೆ, ತಮ್ಮ ಸರ್ಕಾರದ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಮತ್ತು ತಾನು ಮಾಡುತ್ತಿರುವ ಅಭಿವೃದ್ಧಿ ಕೆಲಸಗಳಿಂದ ಜನ ಬಹಳ ಸಂತೋಷದಲ್ಲಿದ್ದಾರೆ ಎಂದು ಲಕ್ಷ್ಮಿ ಹೇಳಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಮಗನಿಗೆ ಟಿಕೆಟ್ ಪಡೆಯುವಲ್ಲಿ ಸಫಲರಾಗಿದ್ದರೆ, ಸತೀಶ್ ಜಾರಕಿಹೊಳಿ ತಮ್ಮ ಮಗಳು ಪ್ರಿಯಾಂಕಾಗಾಗಿ ಚಿಕ್ಕೋಡಿ ಕ್ಷೇತ್ರದ ಲಾಬಿ ಮಾಡಿ ಯಶಕಂಡಿದ್ದಾರೆ. ನಿನ್ನೆ ಬಾಗಲಕೋಟೆಯ ವೀಣಾ ಕಾಶಪ್ಪನವರ್ ಟಿಕೆಟ್ ತಪ್ಪಿದ್ದಕ್ಕೆ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಕ್ಷೇತ್ರದ ಟಿಕೆಟ್ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್ ಪಾಲಾದಂತಿದೆ