ಹಾವೇರಿ:- ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಹಾವೇರಿ ಗದಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ.
ಹೀಗಾಗಿ ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಭರ್ಜರಿ ಮತಬೇಟೆ ನಡೆಸಿದ್ದಾರೆ. ಕ್ಷೇತ್ರದ ಹಾನಗಲ್ ತಾಲೂಕಿನ ನರೆಗಲ್ ಗ್ರಾಮದಲ್ಲಿ ಮತ ಶಿಕಾರಿ ನಡೆಸಿದ್ದಾರೆ.
ಕಳೆದ ಮೂರು ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಜನತೆ ಬಿಜೆಪಿಗೆ ಮತ ಹಾಕಿದ್ದಾರೆ. ಮತ ಹಾಕಿಸಿಕೊಂಡ ಗೆದ್ದು ಸಂಸದರಾಗಿ ಕ್ಷೇತ್ರದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ. ಇವತ್ತು ಅಭಿವೃದ್ಧಿ ವಿಷಯಗಳ ಮೇಲೆ ನಾನು ಮತ ಕೇಳ್ತೆನಿ. ಹೊಸ ಮುಖಕ್ಕೆ ಅವಕಾಶ ಮಾಡಿಕೊಡಿಕೊಡಬೇಕೆಂದು ಕ್ಷೇತ್ರದ ಜನ ತೀರ್ಮಾನ ಮಾಡಿದ್ದಾರೆ. 2 ಲಕ್ಷ ಮತಗಳ ಅಂತರದಿಂದ ಗೆದ್ದು, ಕ್ಷೇತ್ರದ ಜನರ ಕೆಲಸ ಮಾಡ್ತೇನಿ ಎಂದು ಈ ವೇಳೆ ಆನಂದಸ್ವಾಮಿ ಗಡ್ಡದೇವರಮಠ ಹೇಳಿದ್ದಾರೆ.