ಬೆಂಗಳೂರು: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು ಎಂದಿದೆ. ಮಕ್ಕಳಲ್ಲಿರುವ ಗೊಂದಲ ಪರಿಹರಿಸಿದ ಕೋರ್ಟ್, ಸದ್ಯಕ್ಕೆ ರಿಲೀಫ್
ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಗೊಂದಲವನ್ನು ಬಗೆಹರಿಸಿ ಈಗ ಮಕ್ಕಳಿಗೆ ಪರೀಕ್ಷೆ ಬರೆಯಲು ಬಿಡಿ ಎಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಇರುವ ಹೈಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ.
ಬಳಿಕ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಈ ಹಿನ್ನಲೆ ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ಇಂದು ತೀರ್ಪು ಕೊಟ್ಟಿದೆ.
ರಾತ್ರಿ ಅನ್ನ ಉಳಿದರೆ ಅದನ್ನು ಬಿಸಾಡಬೇಡಿ! ಅದರ ಸೇವನೆಯಿಂದಾಗುವ ಪ್ರಯೋಜನ ತಿಳಿದ್ರೆ ಶಾಕ್ ಆಗ್ತಿರಾ.!
ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಹೈಕೋರ್ಟ್ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದವು. ಇದನ್ನು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದ್ದು, ಆದೇಶದಲ್ಲಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿತ್ತು.