ಬೆಳಗಾವಿ:- ಲೋಕಸಭಾ ಚುನಾವಣೆಯಲ್ಲಿ ಯುವಕರು ಈ ಬಾರಿ ಕಾಂಗ್ರೆಸ್ ಗೆ ಬೆಂಬಲಿಸಲಿದ್ದಾರೆ ಎಂದು ಚಿಕ್ಕೋಡಿ ಕಾಂಗ್ರೆಸ್ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯವರು ರಾಮ ಮಂದಿರ ಇಟ್ಟುಕೊಂಡು ಪ್ರಚಾರ ನಡೆಸಿದರೆ ನಾವು ಗ್ಯಾರಂಟಿ ಯೋಜನೆಯನ್ನು ಮುಂದೆ ಇಟ್ಟು ಪ್ರಚಾರ ನಡೆಸುತ್ತೇವೆ. ಚಿಕ್ಕೋಡಿ ಲೋಕಸಭಾದಲ್ಲಿ ಜನರು ಸಾಕಷ್ಟು ಸಂಖ್ಯೆಯಲ್ಲಿ ಬೆಂಬಲ ನೀಡುತ್ತಿದ್ದಾರೆ ಎಂದರು.