ರಾಮನಗರ:- ಕಾಂಗ್ರೆಸ್ ಆಮಿಷಗಳನ್ನ ಒಡ್ಡಿ ಚುನಾವಣೆ ನಡೆಸುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಆಮಿಷಗಳನ್ನ ಒಡ್ಡಿ ಚುನಾವಣೆ ನಡೆಸುತ್ತಿದೆ. ಮೊನ್ನೆಯಷ್ಟೇ ಸೀರೆ, ತವಾಗಳನ್ನು ಕೂಡ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪ್ರಜ್ಞಾವಂತ ಮತದಾರರು ಈ ಬಗ್ಗೆ ಯೋಚನೆ ಮಾಡಿ ಮತಹಾಕಲಿದ್ದಾರೆ. ಈ ಮೂಲಕ ಕಾಂಗ್ರೆಸ್ ಗಿಫ್ಟ್ ಪಾಲಿಟಿಕ್ಸ್ಗೆ ನಿಖಿಲ್ ಕುಮಾರಸ್ವಾಮಿ ಟಕ್ಕರ್ ಕೊಟ್ಟಿದ್ದಾರೆ.
ಇನ್ನು ಕಾಂಗ್ರೆಸ್ನಿಂದ ಆಪರೇಷನ್ ಹಸ್ತ ವಿಚಾರ, ‘ನಮ್ಮ ಪಕ್ಷದ ಕಾರ್ಯಕರ್ತರು ಯಾರೂ ವೀಕ್ ಮೈಂಡೆಡ್ ಅಲ್ಲ, ಒಂದಷ್ಟು ಜನ ನಮ್ಮ ಚುನಾವಣೆಯಲ್ಲಿ ಜೆಡಿಎಸ್ ಸವಲತ್ತು ಪಡೆದು ಅನ್ಯಾಯ ಮಾಡಿದರು. ಇದು ಚುನಾವಣೆಗಳಲ್ಲಿ ಸಹಜ, ಒಂದು ಐದತ್ತು ಪರ್ಸೆಂಟ್ ಜೊತೆಯಲ್ಲೇ ಇದ್ದು ಮೋಸ ಮಾಡುತ್ತಾರೆ. ಇವರು, ‘ನನ್ನ ಚುನಾವಣೆಯಲ್ಲೇ ಕಾಂಗ್ರೆಸ್ಗೆ ಒಂದು ಹೆಜ್ಜೆ ಇಟ್ಟಿದ್ರು, ಇದೀಗ ಎರಡೂ ಕಾಲುಗಳನ್ನು ಕಾಂಗ್ರೆಸ್ಗೆ ಇಟ್ಟಿದ್ದಾರೆ. ಆದರೆ, ಪಕ್ಷ ಕಟ್ಟಿ ಬೆಳೆಸಿರುವ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಜೊತೆಯಲ್ಲೇ ಇದ್ದಾರೆ. ಕಾಂಗ್ರೆಸ್ ಲಕ್ಷ ಲಕ್ಷ ಕೊಟ್ಟರೂ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಏ.26, ಮೇ 7ರಂದು ಮತದಾನ ನಡೆಯಲಿದೆ. ಹಾಗಾಗಿ ಇಂದು ಕಾರ್ಯಕರ್ತರನ್ನ ಸಜ್ಜುಗೊಳಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡ್ತಿದ್ದೇವೆ. ಇನ್ನು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಸರಳ ಸಜ್ಜನಿಕೆ ವ್ಯಕ್ತಿ, ಸುಮಾರು 8 ಲಕ್ಷ ಜನಕ್ಕೆ ಹೃದಯ ಆಪರೇಷನ್ ಮಾಡಿದ್ದಾರೆ. ಅವರ ಸೇವೆ ಬಗ್ಗೆ ಜನ ಮಾತನಾಡ್ತಿದ್ದಾರೆ. ಅವರು ಗೆಲುವು ನಿಶ್ಚಿತ ಎಂದರು.