ಐಪಿಎಲ್ 2024ರ ಮೊದಲ ಪಂದ್ಯದಲ್ಲೇ ಸಿಎಸ್ಕೆ ವಿರುದ್ಧ ಸೋಲು ಕಂಡ ಬಳಿಕ ಆ ಸೋಲಿಗೆ ಕಾರಣ ಏನೆಂಬುವುದನ್ನು RCB ನಾಯಕ ಫಾಪ್ ಡುಪ್ಲೆಸ್ಸಿ ಸ್ಪಷ್ಟಪಡಿಸಿದರು.
ಆರ್ಸಿಬಿಗೆ ಮತ್ತೊಮ್ಮೆ ಕಂಟಕವಾಗಿದ್ದು ಬೌಲರ್ಗಳು. ಬ್ಯಾಟಿಂಗ್ನಲ್ಲಿ ಡೆಪ್ತ್ ಇದ್ದರೂ ಆರ್ಸಿಬಿ ಬೌಲಿಂಗ್ ದುರ್ಬಲ ಎಂಬುದು ಸಾಭೀತಾಯಿತು. ಹೇಳಿಕೊಳ್ಳುವಂತಹ ಸ್ಟಾರ್ ಬೌಲರ್ ತಂಡದಲ್ಲಿ ಇಲ್ಲ. ಆದರೆ, ತನ್ನ ಆಟಗಾರರನ್ನು ನಾಯಕ ಬಿಟ್ಟು ಕೊಡಲಿಲ್ಲ. ಪಂದ್ಯ ಮುಗಿದ ಬಳಿಕ ಫಾಫ್ ಡುಪ್ಲೆಸಿಸ್ ಏನು ಹೇಳಿದ್ದಾರೆ ನೋಡಿ.
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್, ನೀವು ಯಾವಾಗಲೂ ಆಡುವಾಗ, ಆರು ಓವರ್ಗಳ ನಂತರ ಸ್ವಲ್ಪ ಡಿಪ್ ಪಡೆಯುತ್ತೀರಿ. ಈ ಪಂದ್ಯದ ಮಧ್ಯಮ ಓವರ್ಗಳಲ್ಲಿ ಚೆನ್ನೈ ಉತ್ತಮ ಬೌಲಿಂಗ್ ಪ್ರದರ್ಶಿಸಿತು. ಅವರು ತಮ್ಮ ಸ್ಪಿನ್ನರ್ಗಳಿಂದ ಹಿಡಿತ ಸಾಧಿಸಿದರು ಎಂದು ಹೇಳಿದ್ದಾರೆ.
ಬಹುಶಃ ನಾವು ಸುಮಾರು 15 ರಿಂದ 20 ರನ್ ಕಡಿಮೆ ಹೊಡೆದೆವು, ಇದು ಸೋಲಿಗೆ ಕಾರಣವಾಯಿತು. ಪಿಚ್ ನಾವು ಮೊದಲ 10 ಓವರ್ಗಳಲ್ಲಿ ಆಡಿದಷ್ಟು ಕೆಟ್ಟದಾಗಿರಲಿಲ್ಲ. ಅವರು ಚೇಸಿಂಗ್ನಲ್ಲಿ ಮುಂದಿದ್ದರು, ನಾವು ಅವರನ್ನು ಕಟ್ಟಿ ಹಾಕಲು ಮತ್ತು ಒಂದೆರಡು ವಿಕೆಟ್ಗಳನ್ನು ಪಡೆಯಲು ಪ್ರಯತ್ನಿಸಿದೆವು, ಆದರೆ ಕೊನೆಯಲ್ಲಿ ನಮ್ಮ ಬಳಿ ಸಾಕಷ್ಟು ರನ್ ಇರಲಿಲ್ಲ ಎಂಬುದು ಡುಪ್ಲೆಸಿಸ್ ಮಾತು.