ಗದಗ: ಸ್ವಾತಂತ್ರ್ಯ ಹೋರಾಟಗಾರರ ಗ್ರಾಮವೆಂದೇ ಪ್ರಸಿದ್ಧ ಪಡೆದ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರು ಗ್ರಾಮಸ್ಥರು ಪ್ರಸ್ತುತ ಲೋಕಸಭೆ ಚುನಾವಣೆ ಮತದಾನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ. ನ್ಯಾಯ ಸಿಕ್ಕಿಲ್ಲ ಮತ ಹಾಕಲ್ಲ, ಯಾವುದೇ ಸಂಧಾನಕ್ಕೆ ಅವಕಾಶ ಇಲ್ಲ, ನಮ್ಮ ಗ್ರಾಮದ ಅಭಿವೃಧ್ಧಿ ನಮ್ಮ ಹಕ್ಕು ಅಂತಾ ಪ್ರತಿಭಟನೆ ಮಾಡಿದ್ದಾರೆ.
ಗ್ರಾಮದ ಸರ್ವೆ ನಂ. 1 ಮತ್ತು 2 ರ ಈ ಸ್ವತ್ತು ನಮೂನೆ 9 ಹಾಗೂ 11ಎ ಗ್ರಾಮಠಾಣಾವನ್ನಾಗಿ ಪರಿವರ್ತಿಸಿ ಹೊಸ ಗಾವಠಾಣಾ ಗುರುತಿಸಿ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿದ್ದಾರೆ. ಈ ಹಿಂದೆ ಹಲವಾರು ಬಾರಿ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಗಿದೆ ಆದ್ರೆ ಪರಿಹಾರ ಮಾತ್ರ ಸಿಕ್ಕಿಲ್ಲ ಅಂತಾ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಜೊತೆಗೆ ಗ್ರಾಮದ ಇತರೆ ಸಮಸ್ಯೆಗಳಾದ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಗಳು ರಿಪೇರಿ, ಸರಿಯಾದ ಸಾರಿಗೆ ವ್ಯವಸ್ಥೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಗ್ರಾಮಸ್ಥರು ಈ ಬಾರಿ ನಡೆಯುವ ಲೋಕಸಭಾ ಚುನಾವಣೆ ಮತದಾನ ಬಹಿಷ್ಕಾರ ಮಾಡಲು ಮುಂದಾಗಿದ್ದಾರೆ.