ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಬಸವೇಶ್ವರ ಶಿಕ್ಷಣ ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ 32 ಶಿಕ್ಷಕರಿಗೆ ಆರತಿ ಬೆಳಗಿ ಪಾದಗಳಿಗೆ ನಮಸ್ಕಾರ ಮಾಡಿ ಹೂ ಹಾಕುವ ಮುಖಾಂತರ ಸಂಸ್ಥೆಯ ಕಾರ್ಯಾಧ್ಯಕ್ಷ ಬಸವರಾಜ ಕನಬೋಳ ರವರಿಂದ ಗೌರವ ಸಲ್ಲಿಸಿದ ಸನ್ನಿವೇಶ ನಡೆದಿದೆ.
ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಸುಮಾರು 1025 ವಿದ್ಯಾರ್ಥಿಗಳಿದ್ದು ಅದರಲ್ಲಿ 32 ಶಿಕ್ಷಕರು ಸುಮಾರು ಒಂದು ವರ್ಷದಿಂದ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೊಡುವುದರ ಮುಖಾಂತರ ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದಿದೆ.
ಹಾಗಾಗಿ ಶಿಕ್ಷಕರಿಗೆ ನಾವು ಗೌರವ ಕೊಡುವುದು ನಮ್ಮ ಜವಾಬ್ದಾರಿ ಹಾಗಾಗಿ ನಮ್ಮ 32 ಶಿಕ್ಷಕರಿಗೆ ಹೂ ಹಾಕುವುದರ ಮುಖಾಂತರ ಮತ್ತು ಆರತಿ ಬೆಳಗಿ ಪಾದಗಳಿಗೆ ನಮಸ್ಕಾರ ಮಾಡಿ ಅವರಿಗೆ ಗೌರವವನ್ನು ಸಲ್ಲಿಸಿದ್ದೇವೆ ಎಂದರು.
ಪ್ರಕಾಶ ಕುಂಬಾರ
ಬಾಗಲಕೋಟೆ