ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಹಾಲಿ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ. ಹೈಕಮಾಂಡ್ ನಾಯಕರ ನಿರ್ಧಾರವನ್ನು ನಾನು ಒಪ್ಪಲೇಬೇಕಿದೆ. ಅನೇಕ ನಾಯಕರು ಪಕ್ಷಕ್ಕೆ ತ್ಯಾಗ ಮಾಡಿದ್ದಾರೆ.
ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆಗಬೇಕು. ಹೀಗಾಗಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಾಗಿದೆ. ನನ್ನನ್ನು ಏನು ಮಾಡಬೇಕೆಂದು ಪಕ್ಷ ನಿರ್ಧಾರ ಮಾಡಲಿದೆ. ಕೋಲಾರದ ಸದ್ಯದ ಪರಿಸ್ಥಿತಿಯನ್ನು ದೇವೇಗೌಡರಿಗೆ ವಿವರಿಸಿದ್ದೇನೆ. ಜೆಡಿಎಸ್ ಅಭ್ಯರ್ಥಿಗಿಂತ ಹೆಚ್ಚು ಪ್ರಚಾರ ನಾನು ಮಾಡುತ್ತೇನೆ ಎಂದುಮುನಿಸ್ವಾಮಿ ತಿಳಿಸಿದ್ದಾರೆ.