ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಇದೊಂದು ಪುನರ್ಜನ್ಮ ಎಂದೇ ಹೇಳಬಹುದು. ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆಯನ್ನ ಸಲ್ಲಿಸಿದ್ರು. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ. ಸಾಯಿ ಬಾಬಾ ಬಂದು ಆಪರೇಷನ್ ಮಾಡಿದ್ದಾರೆ ಅಂದ್ರು. ಸ್ವತಃ ವೈದ್ಯರೇ ಆ ಮಾತನ್ನು ಹೇಳಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡುತ್ತೇನೆ ಎಂದು ಹೇಳಿದರು.