ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸಭೆಯಲ್ಲಿ ಬಾಗಲಕೋಟೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಮಾತನಾಡಿ. ಬಾಗಲಕೋಟೆ ಜಿಲ್ಲೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಜ್ಞಾವಂತ ಮತದಾರರು ಇದ್ದಾರೆ ಈ ಬಾರಿ ಯಾವುದೇ ಕಾರಣಕ್ಕೂ ಮೋಸ ಹೋಗೋದಿಲ್ಲ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಕೊಟ್ಟು ಲೋಕಸಭೆಗೆ ಆಯ್ಕೆ ಮಾಡುತ್ತಾರೆ ಎಂದು ಆತ್ಮವಿಶ್ವಾಸ ನನಗಿದೆ.
ಎಂಎಲ್ಎ ಎಂ ಪಿ ಫಂಡ ತಂದು ಬಾಗಲಕೋಟೆ ಜಿಲ್ಲೆಯನ್ನು ಅಭಿವೃದ್ಧಿ ಮಾಡುವುದು ನನ್ನ ಮೊದಲ ಸಂಕಲ್ಪವಾಗಿದೆ.ನಾನು ಇರೋದು ಪಕ್ಷದಲ್ಲಿ ಇದ್ದರೂ ಅಷ್ಟೇ ಆಡಳಿತ ಪಕ್ಷದಲ್ಲಿ ಇದ್ದರೂ ಅಷ್ಟೇ ಈ ಜಿಲ್ಲೆಗೆ ಹಗಲಿರುಳು ಶ್ರಮಿಸುತ್ತೇನೆ. ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದು ಗ್ಯಾರೆಂಟಿ ಗಳನ್ನ ನೀಡಿ ನುಡಿದಂತೆ ನಡೆದ ಸರ್ಕಾರ ಮತ್ತು ನಮ್ ಬಾಗಲಕೋಟೆ ಜಿಲ್ಲೆಯ ಐದು ಕಾಂಗ್ರೆಸ್ ಶಾಸಕರು ಮಾಡಿರುವಂತ ಅಭಿವೃದ್ಧಿ ಕೆಲಸ ಮತ್ತು ವಿಶೇಷವಾಗಿ ರೈತರಿಗೆ ನೇಕಾರರಿಗೆ ಕೂಲಿಕಾರ್ಮಿಕರಿಗೆ ವಿಶೇಷ ಯೋಜನೆಗಳನ್ನು ತಂದು ಅವರ ಹಸುವನ್ನ ನೀಗಿಸುವ ಕೆಲಸ ಯಾರಾದರೂ ಮಾಡಿದರೆ ಅದು ಕಾಂಗ್ರೆಸ್ ಪಕ್ಷ ಈ ಕೆಲಸವನ್ನು ನೋಡಿ ನಮಗೆ ಮತವನ್ನು ನೀಡುತ್ತಾರೆ.
ಸಂಯುಕ್ತ ಪಾಟೀಲ್ ಅವರು ಹೊರಗಿನವರಲ್ಲ ಬಾಗಲಕೋಟೆ ಬಿಜಾಪುರ ಅಖಂಡ ಜಿಲ್ಲೆ ಈ ಜಿಲ್ಲೆಯ ಜನರ ಜೊತೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡಿದ್ದೇವೆ ನಾನು ನಿಮ್ಮ ಮನೆಯ ಮಗಳು ಒಟ್ಟಾಗಿ ಎಲ್ಲರೂ ಕೂಡಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸೋಣ.ನಮ್ಮ ಯೋಜನೆಗಳನ್ನು ಪ್ರತಿ ಮನೆಮನೆಗೆ ತಿಳಿಸುವ ಕೆಲಸ ಮಾಡಿ ಕಾಂಗ್ರೆಸ್ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಆರ್ಸಿಬಿಗೆ ಈ ಬಾರಿ ಕಪ್ಪು ಹೇಗೋ ಬಾಗಲಕೋಟೆ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲುವು ಶತಸಿದ್ಧ ಬಾಗಲಕೋಟೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಹೇಳಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿದ್ದು ಕೊಣ್ಣೂರ. ಬಿಮಶಿ ಮಗದುಮ. ಚಿದಾನಂದ ಗಾಳಿ. ಸಂಜು ಜೋತಾವರ. ರಾಜು ಭದ್ರನ್ನವರ. ಡುಂಡಪಾ ಪಾಟೀಲ. ಪರಪ್ಪ ಉರಭಿನವರ. ರಾವುಲ ಕಲಾಲ. ನಿಲಕಂಠ ಮುತ್ತುರ. ಸಿಂಘಾಡಿ ಪಿಂಟು ಕುಂಬಾರ. ಬಸವರಾಜ ಗುಡೊಡಗಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ