ಚಿತ್ರದುರ್ಗ: ಕುಟುಂಬ ರಾಜಕಾರಣವನ್ನು ನಾನೂ ಸಹ ವಿರೋಧಿಸುತ್ತೇನೆ. ಬಿ ಎಸ್ ವೈ ಅವರು ಚುನಾವಣೆ ರಾಜಕೀಯದಿಂದ ನಿವೃತ್ತ ರಾಗಿದ್ದಾರೆ. ನಾನು ಎಬಿವಿಪಿಯಿಂದ ಬಂದು ಸಂಸದನಾಗಿದ್ದೇನೆ. ಯಾವುದೋ ಒತ್ತಡಕ್ಕಾಗಿ ನನಗೆ ಪಕ್ಷ ಟಿಕೆಟ್ ನೀಡಿಲ್ಲ. ಜನರ ವಿಶ್ವಾಸ ಗಳಿಸಿದ್ದೇನೆ, ಪ್ರಾಮಾಣಿಕ ಕೆಲಸ ಮಾಡಿದ್ದರಿಂದ ನನಗೆ ಹೈಕಮಾಂಡ್ ಟಿಕೆಟ್ ನೀಡಿದೆ ಎಂದು ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹೇಳಿದರು.
ಚಿತ್ರದುರ್ಗದಲ್ಲಿ ಬೋವಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಸಂಸದರು, ರಾಜ್ಯಾಧ್ಯಕ್ಷ ಸ್ಥಾನ ಸಂಘಟನೆಗೆ ಶಕ್ತಿ ತುಂಬುವ ಜವಾಬ್ದಾರಿಯನ್ನು ವಿಜಯೇಂದ್ರ ಅವರು ಮಾಡುತ್ತಿದ್ದಾರೆ. ಅಧ್ಯಕ್ಷ ಸ್ಥಾನದ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ, ಪಕ್ಷದ ಗೆಲುವಿಗೆ ಶ್ರಮಿಸುತ್ತಿದ್ದಾರೆ ಎಂದರು.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಗೀತಕ್ಕ, ರಾಘಣ್ಣ ಅವರ ಮಧ್ಯ ನಡೆಯುವ ಚುನಾವಣೆ ಅಲ್ಲ. ಎರಡು ಪಕ್ಷಗಳ ಸಿದ್ಧಾಂತದ ಮೇಲೆ ನಡೆಯುತ್ತಿರುವ ಚುನಾವಣೆ. ಎದುರಾಳಿ ಯಾರೆಂದು ನಾವು ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿ ಹೆಮ್ಮರವಾಗಿ ಬೆಳೆದಿದೆ. ಸುಲಭವಾಗಿ ಎದುರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.