ಬೆಂಗಳೂರು: SSLC ಎಕ್ಸಾಂ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು ನಾಳೆಯಿಂದ ರಾಜ್ಯದಲ್ಲಿ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಸಿಯೂಟ ನೀಡಲು ಆದೇಶ ಮಾಡಿದೆ.
SSLC ವಿದ್ಯಾರ್ಥಿಗಳಿಗೆ ದಿನಾಂಕ 25 ರಿಂದ 06ರವರೆಗೆ ಪರೀಕ್ಷೆ ನಡೆಯಲಿದೆ. ಇದ್ರಿಂದ ಏಪ್ರಿಲ್ 10 ರ ವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ , 1 ರಿಂದ 10ನೇ ತರಗತಿ ವರೆಗಿನ ಶಾಲಾ ಮಕ್ಕಳಿಗೆ ಪರೀಕ್ಷೆ ನಡೆಯುವ ಸಂದರ್ಭದಲ್ಲಿಯೂ, ಮಧ್ಯಾಹ್ನದ ಬಿಸಿಯೂಟವನ್ನು ಪೂರೈಕೆ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಮಾತ್ರವಲ್ಲದೇ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಮತ್ತು ನೈರ್ಮಲ್ಯ ಅಂಶಗಳಿಗೆ ಶಾಲಾ ಮುಖ್ಯಸ್ಥರು, ಅಡುಗೆ ಸಿಬ್ಬಂದಿ ,ನಿರ್ವಾಹಕರು, ಆದ್ಯತೆ ನೀಡಿ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸುವಂತೆ ಸೂಚಿಸಿದೆ.