ಮೈಸೂರು: ಮೈಸೂರು ಕೊಡಗು ಲೋಕಸಭಾ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಎಂಟ್ರಿ ಕೊಟ್ಟಿದ್ದಾರೆ. ಶತಾಯ ಗತಾಯ ಮೈಸೂರು- ಕೊಡಗು ಕ್ಷೇತ್ರ ಗೆಲ್ಲಲು ರಣ ತಂತ್ರ ರೂಪಿಸಲಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸಿಎಂ ಮೈಸೂರು ಕೊಡಗು ಕೈ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರ ಜೊತೆ ಹೈವೊಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮುಖಂಡರು, ಶಾಸಕರು, ಸಚಿವರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಯದುವೀರ್ ಟಾರ್ಗೆಟ್ ಬೇಡ. ಬಿಜೆಪಿ ಅಷ್ಟೆ ನಮ್ಮ ಟಾರ್ಗೆಟ್. ಯದುವೀರ್ ಮಹರಾಜ ಅನ್ನುವುದಕ್ಕಿಂತ ಬಿಜೆಪಿ ಅಭ್ಯರ್ಥಿ ಅನ್ನುವುದಷ್ಟೆ ಇರಲಿ. ಭಾಷಣ ಮಾಡವಾಗ ಎಚ್ಚರ ಇರಲಿ. ಯದುವೀರ್ ವಿರುದ್ಧ ಸಿಕ್ಕ ಸಿಕ್ಕಾಗೆ ಹೇಳಿಕೆ ಕೊಡಬೇಡಿ. ಎಮೋಷನಲ್ ವಿಚಾರವನ್ನ ತಿರುಗಿಸುವಲ್ಲಿ ಬಿಜೆಪಿಯವರು ನಿಸ್ಸೀಮರು. ಹೀಗಾಗಿ ಬಿಜೆಪಿಯವರಿಗೆ ನಿಮ್ಮ ಹೇಳಿಕೆ ಆಹಾರವಾಗಬಾರದು. ಈ ಕಾರಣದಿಂದ ಯದುವೀರ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಸಭೆಯಲ್ಲಿ ಮುಖಂಡರು ಹಾಗೂ ಶಾಸಕರುಗಳಿಗೆ ಸಿಎಂ ಸಿದ್ದರಾಮಯ್ಯ ಹೇಳಿದರು.