ನವದೆಹಲಿ: ಹೋಳಿ ಹಬ್ಬದ ಪ್ರಯುಕ್ತ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಲಡಾಖ್ನ (Ladakh) ಲೇಹ್ಗೆ (Leh) ತೆರಳಿ ಭಾನುವಾರ ಸೈನಿಕರೊಂದಿಗೆ (Soldiers) ಬಣ್ಣದ ಹಬ್ಬ ಹೋಳಿಯನ್ನು ಆಚರಿಸಿದರು. ಹೋಳಿ ಹಬ್ಬ ಆಚರಣೆ ವೇಳೆ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ರಕ್ಷಣಾ ಸಚಿವರು ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ (Siachen) ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಅದು ಸಾಧ್ಯವಾಗಲಿಲ್ಲ. ಭೇಟಿ ಅಸಾಧ್ಯವಾದ ಹಿನ್ನೆಲೆ ಅಲ್ಲಿನ ಕಮಾಂಡಿಂಗ್ ಅಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಾಜನಾಥ್ ಸಿಂಗ್, ಆದಷ್ಟು ಬೇಗ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಈ ಸಂದರ್ಭದಲ್ಲಿ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ ಸಂತೋಷದಾಯಕ ಕ್ಷಣ. ಸಿಯಾಚಿನ್ ಸಾಮಾನ್ಯ ಪ್ರದೇಶವಲ್ಲ. ಇದು ಭಾರತದ ಸಾರ್ವಭೌಮತ್ವ ಮತ್ತು ನಿರ್ಣಯದ ಸಂಕೇತ. ಇದು ನಮ್ಮ ರಾಷ್ಟ್ರೀಯ ನಿರ್ಣಯವನ್ನು ಪ್ರತಿನಿಧಿಸುತ್ತದೆ ಎಂದರು.