ಮೈಸೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ (Supreme Court) ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ನ್ಯಾಯಾಲಯಕ್ಕೆ ನಾವು ಸಹ ಅಗತ್ಯ ದಾಖಲೆಗಳನ್ನ ಒದಗಿಸುತ್ತೇವೆ. ಬರ ಪರಿಹಾರದ ಬಗ್ಗೆ ನ್ಯಾಯಾಲಯವೇ ತೀರ್ಮಾನಿಸಲಿ ಎಂದು ಹೇಳಿದ್ದಾರೆ.
Holi festival: ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ: ಹೋಳಿ ಹಬ್ಬದ ಮಹತ್ವ, ಇತಿಹಾಸ ನಿಮಗೆ ಗೊತ್ತಾ..?
ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವೆ, ರಾಜ್ಯ ಸರ್ಕಾರ (Government Of Karnataka) 5,495 ಕೋಟಿ ವಿಶೇಷ ಅನುದಾನ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಕೇಳಿದ್ದೇವೆ ಅಂಥ ಸುಳ್ಳು ಹೇಳುತ್ತಿದೆ. ಹಣಕಾಸು ಆಯೋಗ ನಿಯಮದ ಪ್ರಕಾರ ಯಾವುದೇ ರಾಜ್ಯಗಳಿಗೆ ಈ ರೀತಿ ವಿಶೇಷ ಅನುದಾನ ಕೊಡಲು ಬರುವುದಿಲ್ಲ. ನೀವು ರಾಜ್ಯದಿಂದ ಆಯ್ಕೆಯಾದ ಸಂಸದರು ಹೀಗಾಗಿ ವಿಶೇಷ ಕೊಡಿಸಿ ಎನ್ನುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.